<p><strong>ನವದೆಹಲಿ:</strong> ನೂತನ ಕೃಷಿ ಕಾಯ್ದೆಗಳು, ಸಿಎಎ ಕುರಿತು ಅಪಪ್ರಚಾರ ಮಾಡುವ ಮೂಲಕ ದೇಶದಲ್ಲಿ ರಾಜಕೀಯ ಅಸ್ಥಿರತೆ ಸೃಷ್ಟಿಸುವ ಪಿತೂರಿ ನಡೆಯುತ್ತಿದೆ. ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿದರು.</p>.<p>ಬಿಜೆಪಿಯ 41ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಆನ್ಲೈನ್ ಮೂಲಕ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಕೈಗೊಂಡ ನಿರ್ಧಾರಗಳ ವಿರುದ್ಧ ಕೆಲವು ವ್ಯಕ್ತಿಗಳು, ಸಂಘಟನೆಗಳಿಂದ ಅಪಪ್ರಚಾರ ನಡೆಯುತ್ತಿದೆ’ ಎಂದು ಟೀಕಿಸಿದರು.</p>.<p>‘ನೂತನ ಕೃಷಿ ಕಾಯ್ದೆಗಳ ಜಾರಿ ಮೂಲಕ ರೈತರ ಜಮೀನುಗಳನ್ನು ವಶಪಡಿಸಿಕೊಳ್ಳಲಾಗುತ್ತದೆ, ಸಿಎಎ ಜಾರಿಯಾದರೆ ಕೆಲವು ಜನರ ಪೌರತ್ವ ರದ್ದಾಗುತ್ತದೆ, ಮೀಸಲಾತಿಯನ್ನೇ ತೆಗೆದು ಹಾಕಲಾಗುತ್ತದೆ ಅಥವಾ ಸಂವಿಧಾನವನ್ನು ಬದಲಾವಣೆ ಮಾಡಲಾಗುತ್ತದೆ ಎಂಬಂಥ ಸುಳ್ಳುಗಳನ್ನು ಹಬ್ಬಿಸಲಾಗುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಉದ್ದೇಶಪೂರ್ವಕವಾಗಿ ಇಂಥ ಸುಳ್ಳುಗಳನ್ನು ಹಬ್ಬಿಸಲಾಗುತ್ತಿದೆ. ಇದು ನಮ್ಮ ಮುಂದಿರುವ ಗಂಭೀರವಾದ ಸವಾಲು. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಎಚ್ಚರದಿಂದಿರಬೇಕು. ಇಂಥ ಸುಳ್ಳುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದರು.</p>.<p>‘ಚುನಾವಣೆಗಳಲ್ಲಿ ಬಿಜೆಪಿ ಸತತ ಗೆಲುವು ಸಾಧಿಸುತ್ತಿರುವುದನ್ನು ವಿರೋಧ ಪಕ್ಷಗಳು ಟೀಕಿಸುತ್ತಿವೆ. ಅವರು ಗೆದ್ದಾಗ ನಾವು ಅವರನ್ನು ಅಭಿನಂದಿಸಿದ್ದೇವೆ. ಹೀಗಾಗಿ ಇದು ವಿಪಕ್ಷಗಳಲ್ಲಿನ ದ್ವಂದ್ವ ನಿಲುವನ್ನು ತೋರಿಸುತ್ತದೆ’ ಎಂದು ಮೋದಿ ಹೇಳಿದರು.</p>.<p>‘ಭಾರತದ ಮತದಾರರು ಪ್ರಬುದ್ಧರಾಗಿದ್ದಾರೆ ಎಂಬುದನ್ನು ವಿರೋಧ ಪಕ್ಷಗಳು ಅರ್ಥ ಮಾಡಿಕೊಳ್ಳುತ್ತಿಲ್ಲ. ಜನರ ಆಶೋತ್ತರಗಳು, ನಿರೀಕ್ಷೆಗಳು, ಅವರ ಕನಸುಗಳನ್ನು ಸಹ ಈ ಜನರು ಅರ್ಥ ಮಾಡಿಕೊಂಡಿಲ್ಲ’ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೂತನ ಕೃಷಿ ಕಾಯ್ದೆಗಳು, ಸಿಎಎ ಕುರಿತು ಅಪಪ್ರಚಾರ ಮಾಡುವ ಮೂಲಕ ದೇಶದಲ್ಲಿ ರಾಜಕೀಯ ಅಸ್ಥಿರತೆ ಸೃಷ್ಟಿಸುವ ಪಿತೂರಿ ನಡೆಯುತ್ತಿದೆ. ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಿದರು.</p>.<p>ಬಿಜೆಪಿಯ 41ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಆನ್ಲೈನ್ ಮೂಲಕ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಕೈಗೊಂಡ ನಿರ್ಧಾರಗಳ ವಿರುದ್ಧ ಕೆಲವು ವ್ಯಕ್ತಿಗಳು, ಸಂಘಟನೆಗಳಿಂದ ಅಪಪ್ರಚಾರ ನಡೆಯುತ್ತಿದೆ’ ಎಂದು ಟೀಕಿಸಿದರು.</p>.<p>‘ನೂತನ ಕೃಷಿ ಕಾಯ್ದೆಗಳ ಜಾರಿ ಮೂಲಕ ರೈತರ ಜಮೀನುಗಳನ್ನು ವಶಪಡಿಸಿಕೊಳ್ಳಲಾಗುತ್ತದೆ, ಸಿಎಎ ಜಾರಿಯಾದರೆ ಕೆಲವು ಜನರ ಪೌರತ್ವ ರದ್ದಾಗುತ್ತದೆ, ಮೀಸಲಾತಿಯನ್ನೇ ತೆಗೆದು ಹಾಕಲಾಗುತ್ತದೆ ಅಥವಾ ಸಂವಿಧಾನವನ್ನು ಬದಲಾವಣೆ ಮಾಡಲಾಗುತ್ತದೆ ಎಂಬಂಥ ಸುಳ್ಳುಗಳನ್ನು ಹಬ್ಬಿಸಲಾಗುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಉದ್ದೇಶಪೂರ್ವಕವಾಗಿ ಇಂಥ ಸುಳ್ಳುಗಳನ್ನು ಹಬ್ಬಿಸಲಾಗುತ್ತಿದೆ. ಇದು ನಮ್ಮ ಮುಂದಿರುವ ಗಂಭೀರವಾದ ಸವಾಲು. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಎಚ್ಚರದಿಂದಿರಬೇಕು. ಇಂಥ ಸುಳ್ಳುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು’ ಎಂದರು.</p>.<p>‘ಚುನಾವಣೆಗಳಲ್ಲಿ ಬಿಜೆಪಿ ಸತತ ಗೆಲುವು ಸಾಧಿಸುತ್ತಿರುವುದನ್ನು ವಿರೋಧ ಪಕ್ಷಗಳು ಟೀಕಿಸುತ್ತಿವೆ. ಅವರು ಗೆದ್ದಾಗ ನಾವು ಅವರನ್ನು ಅಭಿನಂದಿಸಿದ್ದೇವೆ. ಹೀಗಾಗಿ ಇದು ವಿಪಕ್ಷಗಳಲ್ಲಿನ ದ್ವಂದ್ವ ನಿಲುವನ್ನು ತೋರಿಸುತ್ತದೆ’ ಎಂದು ಮೋದಿ ಹೇಳಿದರು.</p>.<p>‘ಭಾರತದ ಮತದಾರರು ಪ್ರಬುದ್ಧರಾಗಿದ್ದಾರೆ ಎಂಬುದನ್ನು ವಿರೋಧ ಪಕ್ಷಗಳು ಅರ್ಥ ಮಾಡಿಕೊಳ್ಳುತ್ತಿಲ್ಲ. ಜನರ ಆಶೋತ್ತರಗಳು, ನಿರೀಕ್ಷೆಗಳು, ಅವರ ಕನಸುಗಳನ್ನು ಸಹ ಈ ಜನರು ಅರ್ಥ ಮಾಡಿಕೊಂಡಿಲ್ಲ’ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>