<p class="rtejustify"><strong>ನವದೆಹಲಿ: </strong>ಕೋವಿಡ್ನಿಂದ ಮೃತಪಟ್ಟ ಕೇಂದ್ರ ಸರ್ಕಾರಿ ನೌಕರರ ಕುಟುಂಬದವರಿಗೆ ಯಾವುದೇ ರೀತಿ ವಿಳಂಬವಾಗದಂತೆ ಪಿಂಚಣಿ ತಲುಪಲಿದೆ. ಪಿಂಚಣಿಗೆ ಕುಟುಂಬದಿಂದ ಕ್ಲೇಮು ಬಂದಂತೆಯೇ ತುರ್ತಾಗಿ ಕ್ರಮವಹಿಸಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಸೂಚನೆ ನೀಡಿದೆ.</p>.<p class="rtejustify">ಕೇಂದ್ರ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಈ ಸಂಬಂಧ ಎಲ್ಲ ಸಚಿವಾಲಯಗಳು, ಇಲಾಖೆಗಳು ಹಾಗೂ ಮಹಾಲೇಖಪಾಲರು ಹಾಗೂ ಪಿಂಚಣಿ ವಿತರಣೆ ಮಾಡುವ ಬ್ಯಾಂಕ್ಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಅಗತ್ಯ ಸೂಚನೆಯನ್ನು ನೀಡಿದೆ.</p>.<p class="rtejustify">ಕುಟುಂಬದ ಅರ್ಹ ಸದಸ್ಯರಿಂದ ಕ್ಲೇಮು ಬಂದ ಒಂದು ತಿಂಗಳಲ್ಲಿ ಪಿಂಚಣಿ ಸೌಲಭ್ಯವು ಆರಂಭವಾಗಬೇಕು ಎಂದು ಸಿಬ್ಬಂದಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ತಿಳಿಸಿದ್ದಾರೆ.</p>.<p class="rtejustify">ಕಚೇರಿ ಸೂಚನೆಯ ಅನುಸಾರ, ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಈ ಕುರಿತ ಅರ್ಜಿಗಳನ್ನು ವೈಯಕ್ತಿಕವಾಗಿ ಗಮನಿಸಬೇಕು ಎಂದು ಸಲಹೆ ಮಾಡಿದ್ದಾರೆ. ಇದಕ್ಕಾಗಿ ಒಬ್ಬ ಅಧಿಕಾರಿಯನ್ನು ನಿಯೋಜಿಸಿ ಆ ಕುರಿತ ವಿವರಗಳನ್ನು ಇಲಾಖೆಯ ವೆಬ್ಸೈಟ್ನಲ್ಲಿಯೂ ಪ್ರಕಟಿಸಬೇಕು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ನವದೆಹಲಿ: </strong>ಕೋವಿಡ್ನಿಂದ ಮೃತಪಟ್ಟ ಕೇಂದ್ರ ಸರ್ಕಾರಿ ನೌಕರರ ಕುಟುಂಬದವರಿಗೆ ಯಾವುದೇ ರೀತಿ ವಿಳಂಬವಾಗದಂತೆ ಪಿಂಚಣಿ ತಲುಪಲಿದೆ. ಪಿಂಚಣಿಗೆ ಕುಟುಂಬದಿಂದ ಕ್ಲೇಮು ಬಂದಂತೆಯೇ ತುರ್ತಾಗಿ ಕ್ರಮವಹಿಸಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಸೂಚನೆ ನೀಡಿದೆ.</p>.<p class="rtejustify">ಕೇಂದ್ರ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಈ ಸಂಬಂಧ ಎಲ್ಲ ಸಚಿವಾಲಯಗಳು, ಇಲಾಖೆಗಳು ಹಾಗೂ ಮಹಾಲೇಖಪಾಲರು ಹಾಗೂ ಪಿಂಚಣಿ ವಿತರಣೆ ಮಾಡುವ ಬ್ಯಾಂಕ್ಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಅಗತ್ಯ ಸೂಚನೆಯನ್ನು ನೀಡಿದೆ.</p>.<p class="rtejustify">ಕುಟುಂಬದ ಅರ್ಹ ಸದಸ್ಯರಿಂದ ಕ್ಲೇಮು ಬಂದ ಒಂದು ತಿಂಗಳಲ್ಲಿ ಪಿಂಚಣಿ ಸೌಲಭ್ಯವು ಆರಂಭವಾಗಬೇಕು ಎಂದು ಸಿಬ್ಬಂದಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ತಿಳಿಸಿದ್ದಾರೆ.</p>.<p class="rtejustify">ಕಚೇರಿ ಸೂಚನೆಯ ಅನುಸಾರ, ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಈ ಕುರಿತ ಅರ್ಜಿಗಳನ್ನು ವೈಯಕ್ತಿಕವಾಗಿ ಗಮನಿಸಬೇಕು ಎಂದು ಸಲಹೆ ಮಾಡಿದ್ದಾರೆ. ಇದಕ್ಕಾಗಿ ಒಬ್ಬ ಅಧಿಕಾರಿಯನ್ನು ನಿಯೋಜಿಸಿ ಆ ಕುರಿತ ವಿವರಗಳನ್ನು ಇಲಾಖೆಯ ವೆಬ್ಸೈಟ್ನಲ್ಲಿಯೂ ಪ್ರಕಟಿಸಬೇಕು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>