‘ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳಿಗೆ ಅನುಮೋದನೆ ನೀಡುವಾಗ ವಿರೋಧ ಪಕ್ಷಗಳು ಮಸೂದೆಗಳನ್ನು ಮತಕ್ಕೆ ಹಾಕಿ ಎಂದು ಒತ್ತಾಯಿಸಿದವು. ಆ ವೇಳೆ ಅವರೆಲ್ಲ ತಮ್ಮ ಸ್ಥಾನಗಳಲ್ಲೇ ಕುಳಿತಿದ್ದರು. ಆದರೆ, ಸರ್ಕಾರ ವಿರೋಧ ಪಕ್ಷದವರು ತಮ್ಮ ಸ್ಥಾನಗಳಲ್ಲಿರಲಿಲ್ಲ ಎಂದು ಹೇಳಿದೆ‘ ಎಂದು ದೂರಿರುವ ರಾಹುಲ್ ಗಾಂಧಿ, ಸರ್ಕಾರದ ಹೇಳಿಕೆಯಿರುವ ಸುದ್ದಿಯ ತುಣಕನ್ನು ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.