ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆಗಳ ಪ್ರಯೋಜನಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಲು ಈಗಲೂ ಸಿದ್ಧ: ತೋಮರ್

Last Updated 19 ಡಿಸೆಂಬರ್ 2021, 13:38 IST
ಅಕ್ಷರ ಗಾತ್ರ

ಗುರುಗ್ರಾಮ: ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರ ಐತಿಹಾಸಿಕ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಣ್ಣಿಸಿದ್ದಾರೆ. ಆದರೆ, ಆ ಕೃಷಿ ಕಾಯ್ದೆಗಳ ಪ್ರಯೋಜನಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಬಿಜೆಪಿ ಕಾರ್ಯಕರ್ತರು ಈಗಲೂ ಸಿದ್ಧರಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಬಿಜೆಪಿಯ ಕಿಸಾನ್ ಮೋರ್ಚಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು, ನಾವು ಯಾವಾಗಲೂ ರೈತರ ಒಳಿತಿಗಾಗಿಯೇ ಕೆಲಸ ಮಾಡಿದ್ದೇವೆ. ರೈತರ ಹಿತಾಸಕ್ತಿಯ ಪರವಾಗಿಯೇ ಮಾತನಾಡಿದ್ದೇವೆ ಎಂದು ಹೇಳಿದ್ದಾರೆ.

ರೈತರ ಪ್ರತಿಭಟನೆಗಳು ಮುಂಬರುವ ವಿಧಾನಸಭೆ ಚುನಾವಣೆಗಳ ಮೇಲೆ ಪರಿಣಾಮ ಬೀರಲಾರವು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ. ರೈತರ ಪ್ರತಿಭಟನೆಯು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನಸಭೆ ಚುನಾವಣೆಗಳೂ ಸೇರಿದಂತೆ ದೇಶದಾದ್ಯಂತ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರದು. ಪಕ್ಷವು ಚುನಾವಣೆಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ಹೇಳಿದ್ದಾರೆ.

ರೈತರ ಆದಾಯವನ್ನು ದ್ವಿಗುಣಗೊಳಿಸಲು ಮೋದಿ ಸರ್ಕಾರ ನಿರಂತರವಾಗಿ ಯತ್ನಿಸುತ್ತಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT