<p><strong>ನವದೆಹಲಿ:</strong> ಬಿಜೆಪಿಯ ಕೋಟ್ಯಧಿಪತಿ ಸ್ನೇಹಿತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ನೂತನ ಮೂರು ಕೃಷಿ ಕಾನೂನುಗಳನ್ನು ರೂಪಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆರೋಪಿಸಿದ್ದಾರೆ.</p>.<p>'ಹಿಮಾಚಲ ಪ್ರದೇಶದಲ್ಲಿ ಅದಾನಿ, ಪ್ರತಿ ಕೆ.ಜಿ ಸೇಬು ದರವನ್ನು ₹16 ಕಡಿಮೆ ಮಾಡಿರುವ ವರದಿಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ರೈತರ ಉತ್ಪನ್ನಗಳನ್ನು ನಿರ್ಧರಿಸುವ ಹಕ್ಕನ್ನು ಆಡಳಿತ ಪಕ್ಷದ ಕೋಟ್ಯಧಿಪತಿ ಸ್ನೇಹಿತರಿಗೆ ನೀಡಿದರೆ ಹೀಗೆ ಸಂಭವಿಸುತ್ತದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ರೈತರ ಸಂಕಷ್ಟಕ್ಕೆ ಕಾರಣವಾಗಿದೆ' ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/rahul-gandhi-slams-centre-over-anti-agriculture-laws-861406.html" itemprop="url">ಕೃಷಿ ವಿರೋಧಿ ಕಾನೂನು ಹಿಂಪಡೆಯಿರಿ: ಕೇಂದ್ರದ ವಿರುದ್ಧ ರಾಹುಲ್ ಕಿಡಿ </a></p>.<p>ಮೂರು 'ಕಪ್ಪು' ಕೃಷಿ ಕಾನೂನುಗಳನ್ನು ರೈತರು ಏಕೆ ವಿರೋಧಿಸುತ್ತಿದ್ದಾರೆ? ಯಾಕೆಂದರೆ ರೈತರ ಶ್ರಮದಿಂದ ಬೆಳೆದ ಬೆಳೆಗಳಿಗೆ ಬೆಲೆ ಮತ್ತು ಇತರ ವಸ್ತುಗಳನ್ನು ನಿರ್ಧರಿಸುವ ಹಕ್ಕನ್ನು ಬಿಜೆಪಿಯ ಕೋಟ್ಯಧಿಪತಿ ಗೆಳೆಯರಿಗೆ ನೀಡಿದರೆ ಇದು ಸಂಭವಿಸುತ್ತದೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಕೃಷಿ ಕಾಯ್ದೆ ರೂಪಿಸಿರುವುದು ಬಿಜೆಪಿಯ ಕೋಟ್ಯಧಿಪತಿ ಸ್ನೇಹಿತರ ಲಾಭಕ್ಕಾಗಿ ಎಂದವರು ಆರೋಪಿಸಿದರು.</p>.<p>ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಕಳೆದ ಒಂಬತ್ತು ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಜೊತೆ ನಡೆಸಿದ ಹಲವು ಸುತ್ತಿನ ಮಾತುಕತೆಗಳು ವಿಫಲಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿಯ ಕೋಟ್ಯಧಿಪತಿ ಸ್ನೇಹಿತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ನೂತನ ಮೂರು ಕೃಷಿ ಕಾನೂನುಗಳನ್ನು ರೂಪಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆರೋಪಿಸಿದ್ದಾರೆ.</p>.<p>'ಹಿಮಾಚಲ ಪ್ರದೇಶದಲ್ಲಿ ಅದಾನಿ, ಪ್ರತಿ ಕೆ.ಜಿ ಸೇಬು ದರವನ್ನು ₹16 ಕಡಿಮೆ ಮಾಡಿರುವ ವರದಿಯನ್ನು ಉಲ್ಲೇಖಿಸಿ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ರೈತರ ಉತ್ಪನ್ನಗಳನ್ನು ನಿರ್ಧರಿಸುವ ಹಕ್ಕನ್ನು ಆಡಳಿತ ಪಕ್ಷದ ಕೋಟ್ಯಧಿಪತಿ ಸ್ನೇಹಿತರಿಗೆ ನೀಡಿದರೆ ಹೀಗೆ ಸಂಭವಿಸುತ್ತದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ರೈತರ ಸಂಕಷ್ಟಕ್ಕೆ ಕಾರಣವಾಗಿದೆ' ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/rahul-gandhi-slams-centre-over-anti-agriculture-laws-861406.html" itemprop="url">ಕೃಷಿ ವಿರೋಧಿ ಕಾನೂನು ಹಿಂಪಡೆಯಿರಿ: ಕೇಂದ್ರದ ವಿರುದ್ಧ ರಾಹುಲ್ ಕಿಡಿ </a></p>.<p>ಮೂರು 'ಕಪ್ಪು' ಕೃಷಿ ಕಾನೂನುಗಳನ್ನು ರೈತರು ಏಕೆ ವಿರೋಧಿಸುತ್ತಿದ್ದಾರೆ? ಯಾಕೆಂದರೆ ರೈತರ ಶ್ರಮದಿಂದ ಬೆಳೆದ ಬೆಳೆಗಳಿಗೆ ಬೆಲೆ ಮತ್ತು ಇತರ ವಸ್ತುಗಳನ್ನು ನಿರ್ಧರಿಸುವ ಹಕ್ಕನ್ನು ಬಿಜೆಪಿಯ ಕೋಟ್ಯಧಿಪತಿ ಗೆಳೆಯರಿಗೆ ನೀಡಿದರೆ ಇದು ಸಂಭವಿಸುತ್ತದೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಕೃಷಿ ಕಾಯ್ದೆ ರೂಪಿಸಿರುವುದು ಬಿಜೆಪಿಯ ಕೋಟ್ಯಧಿಪತಿ ಸ್ನೇಹಿತರ ಲಾಭಕ್ಕಾಗಿ ಎಂದವರು ಆರೋಪಿಸಿದರು.</p>.<p>ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಕಳೆದ ಒಂಬತ್ತು ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಜೊತೆ ನಡೆಸಿದ ಹಲವು ಸುತ್ತಿನ ಮಾತುಕತೆಗಳು ವಿಫಲಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>