ಉತ್ತರ ಪ್ರದೇಶದ ಜಾನ್ಪುರದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ನಾವು ರೈತರನ್ನು ದೇವರೆಂದು ಪರಿಗಣಿಸುತ್ತೇವೆ. ಬಿಜೆಪಿ ಸರ್ಕಾರ ರೈತರ ಬಗ್ಗೆ ಸದಾ ಸಹಾನುಭೂತಿ ಹೊಂದಿದೆ. ಮೂರು ಕಾನೂನುಗಳ ವಿರುದ್ಧ ಹೋರಾಟ ನಡೆಯಿತು. ಆ ಹಿನ್ನೆಲೆಯಲ್ಲಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಧಾನಿ ಮೋದಿ ಮಾಡಿದ್ದಾರೆ‘ ಎಂದು ಹೇಳಿದರು.