<p><strong>ನವದೆಹಲಿ: </strong>ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುವ ಹಿನ್ನೆಲೆಯಲ್ಲಿ ಪಂಜಾಬ್ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ವರಿಂದರ್ಪಾಲ್ ಸಿಂಗ್ ಅವರು, ಭಾರತೀಯ ರಸಗೊಬ್ಬರ ಉದ್ದಿಮೆಗಳ ಸಂಘ(ಎಫ್ಎಐ) ನೀಡಲಿರುವ ‘ಎಫ್ಎಐ ಸುವರ್ಣ ಮಹೋತ್ಸವ ಪ್ರಶಸ್ತಿ’ಯನ್ನು ನಿರಾಕರಿಸಿದ್ದಾರೆ.</p>.<p>ಸಸ್ಯ ಪೋಷಣೆ ಕ್ಷೇತ್ರದಲ್ಲಿ ಮಾಡಿದ ಅತ್ಯುತ್ತಮ ಸಾಧನೆಗಾಗಿ ವರಿಂದರ್ಪಾಲ್ ಸಿಂಗ್ ಅವರನ್ನು ಎಫ್ಐಐ ಗೋಲ್ಡನ್ ಜುಬಿಲಿ ಎಕ್ಸಲೆನ್ಸ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಪ್ರಶಸ್ತಿಯು ₹2 ಲಕ್ಷ ನಗದು, ಚಿನ್ನದ ಪದಕ ಒಳಗೊಂಡಿದೆ.</p>.<p>ಸೋಮವಾರ ನಡೆದ ಎಫ್ಎಐ ವಾರ್ಷಿಕ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವರಿಂದರ್ ಪಾಲ್ ಸಿಂಗ್ ಅವರು ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರುವುದನ್ನು ಎಫ್ಎಐನ ಮಹಾ ನಿರ್ದೇಶಕ ಸತೀಶ್ ಚಂದರ್ ದೃಢಪಡಿಸಿದ್ದಾರೆ. ಇದೇ ವೇಳೆ, ‘ಈ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸುವುದು ಸರಿಯಲ್ಲ‘ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ಈ ಸಂಸ್ಥೆ ವಿವಿಧ ವಿಭಾಗಗಳಲ್ಲಿ ಒಟ್ಟು 34 ಪ್ರಶಸ್ತಿಗಳನ್ನು ಪ್ರಕಟಿಸಿತ್ತು. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವ ಮನ್ಸುಖ್ ಲಾಲ್ ಮಾಂಡವಿಯಾ ಉಪಸ್ಥಿತರಿದ್ದರು.</p>.<p>‘ದೇಶದಲ್ಲಿ ರೈತರು ತಮ್ಮ ಹಕ್ಕುಗಳಿಗಾಗಿ ಒತ್ತಾಯಿಸಿ ರಸ್ತೆಗಿಳಿದು ಪ್ರತಿಭಟಿಸುತ್ತಿರುವಾಗ ಈ ಪ್ರಶಸ್ತಿಯನ್ನು ಸ್ವೀಕರಿಸಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ. ಹಾಗಾಗಿ ನಾನು ವಿನಮ್ರವಾಗಿ ಈ ಪ್ರಶಸ್ತಿಯನ್ನು ನಿರಾಕರಿಸುತ್ತಿದ್ದೇನೆ‘ ಎಂದು ಹೇಳಿರುವ ವಿಡಿಯೊ ಸಂದೇಶವನ್ನು ವರಿಂದರ್ ಸಿಂಗ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಿಡುಗಡೆ ಮಾಡಿದ್ದಾರೆ.</p>.<p>ಪಂಜಾಬ್ ಕೃಷಿ ವಿಶ್ವವಿದ್ಯಾಲಯದ ಮಣ್ಣಿನ ವಿಜ್ಞಾನ ವಿಭಾಗದಲ್ಲಿ ಹಿರಿಯ ವಿಜ್ಞಾನಿಯಾಗಿರುವ ಅವರು ಪ್ರಶಸ್ತಿ ಸ್ವೀಕರಿಸದಿರುವುದಕ್ಕೆ ಕ್ಷಮೆಯಾಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುವ ಹಿನ್ನೆಲೆಯಲ್ಲಿ ಪಂಜಾಬ್ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ವರಿಂದರ್ಪಾಲ್ ಸಿಂಗ್ ಅವರು, ಭಾರತೀಯ ರಸಗೊಬ್ಬರ ಉದ್ದಿಮೆಗಳ ಸಂಘ(ಎಫ್ಎಐ) ನೀಡಲಿರುವ ‘ಎಫ್ಎಐ ಸುವರ್ಣ ಮಹೋತ್ಸವ ಪ್ರಶಸ್ತಿ’ಯನ್ನು ನಿರಾಕರಿಸಿದ್ದಾರೆ.</p>.<p>ಸಸ್ಯ ಪೋಷಣೆ ಕ್ಷೇತ್ರದಲ್ಲಿ ಮಾಡಿದ ಅತ್ಯುತ್ತಮ ಸಾಧನೆಗಾಗಿ ವರಿಂದರ್ಪಾಲ್ ಸಿಂಗ್ ಅವರನ್ನು ಎಫ್ಐಐ ಗೋಲ್ಡನ್ ಜುಬಿಲಿ ಎಕ್ಸಲೆನ್ಸ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಪ್ರಶಸ್ತಿಯು ₹2 ಲಕ್ಷ ನಗದು, ಚಿನ್ನದ ಪದಕ ಒಳಗೊಂಡಿದೆ.</p>.<p>ಸೋಮವಾರ ನಡೆದ ಎಫ್ಎಐ ವಾರ್ಷಿಕ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವರಿಂದರ್ ಪಾಲ್ ಸಿಂಗ್ ಅವರು ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರುವುದನ್ನು ಎಫ್ಎಐನ ಮಹಾ ನಿರ್ದೇಶಕ ಸತೀಶ್ ಚಂದರ್ ದೃಢಪಡಿಸಿದ್ದಾರೆ. ಇದೇ ವೇಳೆ, ‘ಈ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸುವುದು ಸರಿಯಲ್ಲ‘ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ಈ ಸಂಸ್ಥೆ ವಿವಿಧ ವಿಭಾಗಗಳಲ್ಲಿ ಒಟ್ಟು 34 ಪ್ರಶಸ್ತಿಗಳನ್ನು ಪ್ರಕಟಿಸಿತ್ತು. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವ ಮನ್ಸುಖ್ ಲಾಲ್ ಮಾಂಡವಿಯಾ ಉಪಸ್ಥಿತರಿದ್ದರು.</p>.<p>‘ದೇಶದಲ್ಲಿ ರೈತರು ತಮ್ಮ ಹಕ್ಕುಗಳಿಗಾಗಿ ಒತ್ತಾಯಿಸಿ ರಸ್ತೆಗಿಳಿದು ಪ್ರತಿಭಟಿಸುತ್ತಿರುವಾಗ ಈ ಪ್ರಶಸ್ತಿಯನ್ನು ಸ್ವೀಕರಿಸಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ. ಹಾಗಾಗಿ ನಾನು ವಿನಮ್ರವಾಗಿ ಈ ಪ್ರಶಸ್ತಿಯನ್ನು ನಿರಾಕರಿಸುತ್ತಿದ್ದೇನೆ‘ ಎಂದು ಹೇಳಿರುವ ವಿಡಿಯೊ ಸಂದೇಶವನ್ನು ವರಿಂದರ್ ಸಿಂಗ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬಿಡುಗಡೆ ಮಾಡಿದ್ದಾರೆ.</p>.<p>ಪಂಜಾಬ್ ಕೃಷಿ ವಿಶ್ವವಿದ್ಯಾಲಯದ ಮಣ್ಣಿನ ವಿಜ್ಞಾನ ವಿಭಾಗದಲ್ಲಿ ಹಿರಿಯ ವಿಜ್ಞಾನಿಯಾಗಿರುವ ಅವರು ಪ್ರಶಸ್ತಿ ಸ್ವೀಕರಿಸದಿರುವುದಕ್ಕೆ ಕ್ಷಮೆಯಾಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>