<p><strong>ಚಂಡಿಗಡ:</strong> ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಟಿಕ್ರಿ ಗಡಿ ಭಾಗದ ಸಮೀಪದ ಹಳ್ಳಿಯೊಂದರಲ್ಲಿ 38ರ ವರ್ಷದ ರೈತರೊಬ್ಬರು ಗುರುವಾರ ಮುಂಜಾನೆ ಸಾವನ್ನಪ್ಪಿದ್ದಾರೆ.</p>.<p>ಮೃತ ರೈತರನ್ನು ಬತ್ತಿಂಡ ಜಿಲ್ಲೆಯ ತುಂಗ್ವಾಲಿ ಹಳ್ಳಿಯ ನಿವಾಸಿ ಜೈಸಿಂಗ್ ಎಂದು ಗುರುತಿಸಲಾಗಿದೆ. ಇವರ ಸಹೋದರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣ–ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘ(ಬಿಕೆಯು–ಏಕ್ತಾ ಉಗ್ರಹಾನ್) ಮುಖಂಡ ಶಿಂಗಾರ್ ಸಿಂಗ್ ತಿಳಿಸಿದ್ದಾರೆ.</p>.<p>ರೈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ಸಾವಿಗೆ ಕಾರಣ ತಿಳಿಯಬಹುದು ಎಂದು ಬಹದ್ದೂರ್ಗಡ ಠಾಣೆಯ ಪೊಲಿಸ್ ಅಧಿಕಾರಿ ತಿಳಿಸಿದ್ದಾರೆ.</p>.<p>ದೆಹಲಿಯ ಗಡಿಭಾಗಗಳಲ್ಲಿ ರೈತರ ಪ್ರತಿಭಟನೆ ಆರಂಭವಾದಾಗಿನಿಂದ ಪಂಜಾಬ್ನಲ್ಲಿ ವಿವಿಧ ಕಾರಣಗಳಿಂದಾಗಿ 20 ಮಂದಿ ರೈತರು ಸಾವನ್ನಪ್ಪಿದ್ದಾರೆ ಎಂದು ಬಿಕೆಯು ಸಂಘಟನೆಯ ಮುಖಂಡರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡಿಗಡ:</strong> ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಟಿಕ್ರಿ ಗಡಿ ಭಾಗದ ಸಮೀಪದ ಹಳ್ಳಿಯೊಂದರಲ್ಲಿ 38ರ ವರ್ಷದ ರೈತರೊಬ್ಬರು ಗುರುವಾರ ಮುಂಜಾನೆ ಸಾವನ್ನಪ್ಪಿದ್ದಾರೆ.</p>.<p>ಮೃತ ರೈತರನ್ನು ಬತ್ತಿಂಡ ಜಿಲ್ಲೆಯ ತುಂಗ್ವಾಲಿ ಹಳ್ಳಿಯ ನಿವಾಸಿ ಜೈಸಿಂಗ್ ಎಂದು ಗುರುತಿಸಲಾಗಿದೆ. ಇವರ ಸಹೋದರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣ–ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘ(ಬಿಕೆಯು–ಏಕ್ತಾ ಉಗ್ರಹಾನ್) ಮುಖಂಡ ಶಿಂಗಾರ್ ಸಿಂಗ್ ತಿಳಿಸಿದ್ದಾರೆ.</p>.<p>ರೈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ಸಾವಿಗೆ ಕಾರಣ ತಿಳಿಯಬಹುದು ಎಂದು ಬಹದ್ದೂರ್ಗಡ ಠಾಣೆಯ ಪೊಲಿಸ್ ಅಧಿಕಾರಿ ತಿಳಿಸಿದ್ದಾರೆ.</p>.<p>ದೆಹಲಿಯ ಗಡಿಭಾಗಗಳಲ್ಲಿ ರೈತರ ಪ್ರತಿಭಟನೆ ಆರಂಭವಾದಾಗಿನಿಂದ ಪಂಜಾಬ್ನಲ್ಲಿ ವಿವಿಧ ಕಾರಣಗಳಿಂದಾಗಿ 20 ಮಂದಿ ರೈತರು ಸಾವನ್ನಪ್ಪಿದ್ದಾರೆ ಎಂದು ಬಿಕೆಯು ಸಂಘಟನೆಯ ಮುಖಂಡರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>