ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ನಡೆಯುವ ರೈತರ ಸಮಾವೇಶಗಳಲ್ಲಿ ರಾಕೇಶ್ ಟಿಕಾಯತ್ ಭಾಗವಹಿಸಲಿದ್ದಾರೆ. ಹಾಗೇ ಮಾರ್ಚ್ನಲ್ಲಿ ಉತ್ತರ ಪ್ರದೇಶದಲ್ಲಿ ಎರಡು ರೈತ ಸಮಾವೇಶಗಳನ್ನು ಆಯೋಜಿಸಲಾಗಿದ್ದು ಆ ಕಾರ್ಯಕ್ರಮಗಳಲ್ಲೂ ಅವರು ಪಾಲ್ಗೊಳುವರು ಎಂದು ಭಾರತೀಯ ಕಿಸಾನ್ ಒಕ್ಕೂಟದ ಪದಾಧಿಕಾರಿ ಧರ್ಮೇಂದ್ರ ಮಲಿಕ್ ತಿಳಿಸಿದ್ದಾರೆ.