<p><strong>ಗಾಜಿಯಾಬಾದ್: </strong>ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೆಹಲಿ – ಉತ್ತರ ಪ್ರದೇಶ ರಾಜ್ಯದ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಬರುವ ಮಾರ್ಚ್ನಲ್ಲಿ 5 ರಾಜ್ಯಗಳಿಗೆ ಭೇಟಿ ನೀಡಿ ರೈತರಿಂದ ಬೆಂಬಲ ಪಡೆಯಲಿದ್ದಾರೆ.</p>.<p>ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ನಡೆಯುವ ರೈತರ ಸಮಾವೇಶಗಳಲ್ಲಿ ರಾಕೇಶ್ ಟಿಕಾಯತ್ ಭಾಗವಹಿಸಲಿದ್ದಾರೆ. ಹಾಗೇ ಮಾರ್ಚ್ನಲ್ಲಿ ಉತ್ತರ ಪ್ರದೇಶದಲ್ಲಿ ಎರಡು ರೈತ ಸಮಾವೇಶಗಳನ್ನು ಆಯೋಜಿಸಲಾಗಿದ್ದು ಆ ಕಾರ್ಯಕ್ರಮಗಳಲ್ಲೂ ಅವರು ಪಾಲ್ಗೊಳುವರು ಎಂದು ಭಾರತೀಯ ಕಿಸಾನ್ ಒಕ್ಕೂಟದ ಪದಾಧಿಕಾರಿ ಧರ್ಮೇಂದ್ರ ಮಲಿಕ್ ತಿಳಿಸಿದ್ದಾರೆ.</p>.<p>ರಾಜಸ್ಥಾನದಲ್ಲಿ ಎರಡು ಮತ್ತು ಮಧ್ಯಪ್ರದೇಶದಲ್ಲಿ ಮೂರು ಸಭೆಗಳು ನಡೆಯಲಿವೆ. ಕೊನೆಯ ಮೂರು ಸಮಾವೇಶಗಳು ಮಾರ್ಚ್ 20, 21 ಮತ್ತು 22ರಂದು ಕರ್ನಾಟಕದಲ್ಲಿ ನಡೆಯಲಿವೆ ಎಂದು ಮಲಿಕ್ ತಿಳಿಸಿದ್ದಾರೆ.</p>.<p>'ತೆಲಂಗಾಣದಲ್ಲಿ ಮಾರ್ಚ್ 6ರಂದು ಸಮಾವೇಶ ನಿಗದಿಯಾಗಿದ್ದು, ಅಲ್ಲಿ ಚುನಾವಣೆ ಇರುವುದರಿಂದ ಇನ್ನೂ ಅನುಮತಿ ಸಿಕ್ಕಿಲ್ಲ. ಅನುಮತಿ ನೀಡಿದರೆ, ನಿಗದಿಯಂತೆ ತೆಲಂಗಾಣದಲ್ಲಿ ಸಭೆ ನಡೆಸಲಾಗುವುದು' ಎಂದು ಅವರು ತಿಳಿಸಿದರು.</p>.<p>ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಹೊಸ ಕಾಯ್ದೆ ರೂಪಿಸಬೇಕು ಎಂದು ಆಗ್ರಹಿಸಿ ಸಾವಿರಾರು ರೈತರು ದೆಹಲಿಯ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಿಯಾಬಾದ್: </strong>ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೆಹಲಿ – ಉತ್ತರ ಪ್ರದೇಶ ರಾಜ್ಯದ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಬರುವ ಮಾರ್ಚ್ನಲ್ಲಿ 5 ರಾಜ್ಯಗಳಿಗೆ ಭೇಟಿ ನೀಡಿ ರೈತರಿಂದ ಬೆಂಬಲ ಪಡೆಯಲಿದ್ದಾರೆ.</p>.<p>ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ನಡೆಯುವ ರೈತರ ಸಮಾವೇಶಗಳಲ್ಲಿ ರಾಕೇಶ್ ಟಿಕಾಯತ್ ಭಾಗವಹಿಸಲಿದ್ದಾರೆ. ಹಾಗೇ ಮಾರ್ಚ್ನಲ್ಲಿ ಉತ್ತರ ಪ್ರದೇಶದಲ್ಲಿ ಎರಡು ರೈತ ಸಮಾವೇಶಗಳನ್ನು ಆಯೋಜಿಸಲಾಗಿದ್ದು ಆ ಕಾರ್ಯಕ್ರಮಗಳಲ್ಲೂ ಅವರು ಪಾಲ್ಗೊಳುವರು ಎಂದು ಭಾರತೀಯ ಕಿಸಾನ್ ಒಕ್ಕೂಟದ ಪದಾಧಿಕಾರಿ ಧರ್ಮೇಂದ್ರ ಮಲಿಕ್ ತಿಳಿಸಿದ್ದಾರೆ.</p>.<p>ರಾಜಸ್ಥಾನದಲ್ಲಿ ಎರಡು ಮತ್ತು ಮಧ್ಯಪ್ರದೇಶದಲ್ಲಿ ಮೂರು ಸಭೆಗಳು ನಡೆಯಲಿವೆ. ಕೊನೆಯ ಮೂರು ಸಮಾವೇಶಗಳು ಮಾರ್ಚ್ 20, 21 ಮತ್ತು 22ರಂದು ಕರ್ನಾಟಕದಲ್ಲಿ ನಡೆಯಲಿವೆ ಎಂದು ಮಲಿಕ್ ತಿಳಿಸಿದ್ದಾರೆ.</p>.<p>'ತೆಲಂಗಾಣದಲ್ಲಿ ಮಾರ್ಚ್ 6ರಂದು ಸಮಾವೇಶ ನಿಗದಿಯಾಗಿದ್ದು, ಅಲ್ಲಿ ಚುನಾವಣೆ ಇರುವುದರಿಂದ ಇನ್ನೂ ಅನುಮತಿ ಸಿಕ್ಕಿಲ್ಲ. ಅನುಮತಿ ನೀಡಿದರೆ, ನಿಗದಿಯಂತೆ ತೆಲಂಗಾಣದಲ್ಲಿ ಸಭೆ ನಡೆಸಲಾಗುವುದು' ಎಂದು ಅವರು ತಿಳಿಸಿದರು.</p>.<p>ವಿವಾದಾತ್ಮಕ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಹೊಸ ಕಾಯ್ದೆ ರೂಪಿಸಬೇಕು ಎಂದು ಆಗ್ರಹಿಸಿ ಸಾವಿರಾರು ರೈತರು ದೆಹಲಿಯ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>