ನವದೆಹಲಿ: ಕೃಷಿ ಕಾಯ್ದೆಗಳ ಬಗ್ಗೆ ತಮ್ಮ ನಿಲುವಿಗೆ ಅಂಟಿಕೊಂಡಿರುವ ರೈತರು ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ಇದರ ಅಂಗವಾಗಿ ಡಿ.14ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ.
‘ಸರ್ಕಾರ ಮಾತುಕತೆಗೆ ಕರೆದರೆ ನಾವು ಸಿದ್ಧರಿದ್ದೇವೆ. ನಮ್ಮ ಬೇಡಿಕೆಗಳು ಈಡೇರಿದ ಬಳಿಕವಷ್ಟೇ ಉಳಿದ ವಿಚಾರ’ ಎಂದು ರೈತ ನಾಯಕ ಕನ್ವಲ್ಪ್ರೀತ್ ಸಿಂಗ್ ಪನ್ನು ಸ್ಪಷ್ಟಪಡಿಸಿದ್ದಾರೆ.
ಸಿಂಘು ಗಡಿಯಲ್ಲಿ ಶನಿವಾರ ಮಾತನಾಡಿದ ಅವರು, ರಾಜಸ್ಥಾನದ ಷಹಜಹಾನ್ಪುರದಿಂದ ಸಾವಿರಾರು ರೈತರು ಭಾನುವಾರ ‘ದೆಹಲಿ ಚಲೊ’ ಆರಂಭಿಸಲಿದ್ದಾರೆ ಎಂದು ಮಾಹಿತಿ ನೀಡಿದರು.