ರೈತರ ಪ್ರತಿಭಟನೆ ಬಿಜೆಪಿ ಸರ್ಕಾರದ ವೈಫಲ್ಯದ ಸಂಕೇತ: ಅಖಿಲೇಶ್

ಲಖನೌ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯು ಬಿಜೆಪಿ ಸರ್ಕಾರದ ವೈಫಲ್ಯದ ಸಂಕೇತ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು,‘ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯು ಇಂದಿಗೆ ಒಂದು ತಿಂಗಳು ಪೂರೈಸಿದೆ. ತಮ್ಮ ಆತ್ಮೀಯ ಶ್ರೀಮಂತ ಸ್ನೇಹಿತರಿಗಾಗಿ ಬಿಜೆಪಿಯು ರೈತರು, ಕಾರ್ಮಿಕರು, ಮಧ್ಯಮ ಮತ್ತು ಕೆಳವರ್ಗದರ ಇಚ್ಛೆಗೆ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ. ರೈತರ ಈ ಪ್ರತಿಭಟನೆಯು ಬಿಜೆಪಿ ಸರ್ಕಾರದ ವೈಫಲ್ಯದ ಜೀವಂತ ಸ್ಮಾರಕವಾಗಿದೆ’ ಎಂದಿದ್ದಾರೆ.
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ಇತರ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟಿಸುತ್ತಿದ್ದಾರೆ. ಈ ಪ್ರತಿಭಟನೆಯು ಶುಕ್ರವಾರ 30 ನೇ ದಿನಕ್ಕೆ ಕಾಲಿಟ್ಟಿದೆ.
आज कृषि-कानूनों के ख़िलाफ़ हो रहे आंदोलन का एक महीना पूरा हो रहा है. भाजपा अपने प्रिय अमीर मित्रों व पूंजीपति प्रायोजकों का समर्थन करते हुए ऐसे रास्ते पर चल पड़ी है जो किसान, मज़दूर, निम्न व मध्यवर्ग सबके विरुद्ध जाता है.
किसान-आंदोलन भाजपा सरकार की विफलता का जीवंत स्मारक है.
— Akhilesh Yadav (@yadavakhilesh) December 25, 2020
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.