ನವದೆಹಲಿ: ಗಮನಾರ್ಹ ಬೆಳವಣಿಗೆಯೊಂದರಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಗಾಜಿಪುರ ಗಡಿಯಲ್ಲಿ ಬ್ಯಾರಿಕೇಡ್ಗಳ ಬಳಿ ರಸ್ತೆಯಲ್ಲಿ ಸ್ಥಾಪಿಸಲಾದ ಮೊಳೆಗಳನ್ನು ಪೊಲೀಸರು ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಈ ಸಂಬಂಧ ತಾಜಾ ವಿಡಿಯೊವನ್ನು ಎಎನ್ಐ ಸುದ್ದಿ ಸಂಸ್ಥೆ ಬಿಡುಗಡೆ ಮಾಡಿದೆ.
ಜನವರಿ 26 ಗಣರಾಜ್ಯೋತ್ಸವ ದಿನದಂದು ರೈತರು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್ ಪೆರೇಡ್ನಲ್ಲಿ ಹಿಂಸಾಚಾರ ಘಟಿಸಿರುವ ಹಿನ್ನೆಲೆಯಲ್ಲಿ ದೆಹಲಿ-ಉತ್ತರ ಪ್ರದೇಶದ ಗಾಜಿಪುರ ಸೇರಿದಂತೆ ದೆಹಲಿ-ಹರಿಯಾಣದ ಟಿಕ್ರಿ ಗಡಿ ಪ್ರದೇಶಗಳಲ್ಲಿ ಬ್ಯಾರಿಕೇಡ್ ಬಳಿ ರಸ್ತೆಗಳಲ್ಲಿ ಮೊಳೆಗಳನ್ನು ಲಗತ್ತಿಸಲಾಗಿತ್ತು.
#WATCH | Nails that were fixed near barricades at Ghazipur border (Delhi-UP border) are being removed. pic.twitter.com/YWCQxxyNsH
ರೈತರ ಸಂಚಾರವನ್ನು ತಡೆಯುವ ನಿಟ್ಟಿನಲ್ಲಿ ಬೃಹತ್ ಬ್ಯಾರಿಕೇಡ್, ಮುಳ್ಳುಗಳ ತಂತಿ ಹಾಗೂ ಸಿಮೆಂಟ್ ಬ್ಯಾರಿಕೇಡ್ಗಳನ್ನು ರಸ್ತೆಗಳಲ್ಲಿ ಸ್ಥಾಪಿಸಲಾಗಿತ್ತು. ಸರ್ಕಾರದ ಈ ಕ್ರಮವು ವಿರೋಧ ಪಕ್ಷದಿಂದ ಭಾರಿ ಆಕ್ರೋಶಕ್ಕೆಕಾರಣವಾಗಿತ್ತು.