<p><strong>ನವದೆಹಲಿ</strong>:ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಕೇಂದ್ರ ಸರ್ಕಾರವು ಹರಿಹಾಯ್ದಿದೆ.ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಮತ್ತು ಈ ಪ್ರತಿಭಟನೆ ಬಗ್ಗೆ ಸಹಾನುಭೂತಿ ಉಳ್ಳವರು ಈ ಕಾಯ್ದೆಗಳ ಒಂದೇ ಒಂದು ಲೋಪವನ್ನು ಎತ್ತಿ ತೋರಿಸಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.</p>.<p>ರೈತರ ಭಾವನೆಗಳಿಗೆ ಸ್ಪಂದಿಸುವ ಕಾರಣಕ್ಕಾಗಿ ಮಾತ್ರ ಈ ಕಾಯ್ದೆಗಳಿಗೆ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿತ್ತೇ ವಿನಹ, ಅವು<br />ಗಳಲ್ಲಿ ಲೋಪ ಇದೆ ಎಂದಲ್ಲ ಎಂದು ತೋಮರ್ ಹೇಳಿದರು.</p>.<p>‘ಬೇಸಾಯ ಮಾಡಲು ನೀರು ಬೇಕು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ರಕ್ತವನ್ನು ಬಳಸಿಕೊಂಡು ಬೇಸಾಯ ಮಾಡುವುದು ಕಾಂಗ್ರೆಸ್ಗೆ ಮಾತ್ರ ಸಾಧ್ಯ. ಬಿಜೆಪಿಗೆ ಅದು ಸಾಧ್ಯವಿಲ್ಲ’ ಎಂದರು.</p>.<p>‘ಈ ಮೂರು ಕಾಯ್ದೆಗಳಲ್ಲಿ ಕರಾಳ ಏನಿದೆ ಎಂದು ನಾನು ರೈತ ಸಂಘಟನೆಗಳನ್ನು ಕಳೆದ ಎರಡು ತಿಂಗಳಿನಿಂದ ಕೇಳುತ್ತಲೇ ಇದ್ದೇನೆ. ಆದರೆ, ನನಗೆ ಉತ್ತರ ಸಿಕ್ಕಿಲ್ಲ. ಹಾಗೆಯೇ ಕಾಯ್ದೆಗಳಲ್ಲಿ ರೈತ ವಿರೋಧಿಯಾದದ್ದು ಏನಿದೆ ಎಂದು ಯಾರೂ ತೋರಿಸಿಕೊಟ್ಟಿಲ್ಲ’ ಎಂದು ತೋಮರ್ ಹೇಳಿದ್ದಾರೆ.</p>.<p>ರೈತರ ಪ್ರತಿಭಟನೆಯು 72ನೇ ದಿನ ಪೂರೈಸಿದೆ. ಪ್ರತಿಭಟನೆಯು ಈಗ ಬಿಜೆಪಿ ಆಳ್ವಿಕೆ ಇರುವ ಹರಿಯಾಣ ಮತ್ತು ಉತ್ತರ ಪ್ರದೇಶಕ್ಕೂ ವ್ಯಾಪಿಸಿದೆ. ಆದರೆ, ‘ಒಂದು ರಾಜ್ಯದ ರೈತರು ಮಾತ್ರ ಪ್ರತಿಭಟಿ<br />ಸುತ್ತಿದ್ದಾರೆ.ಪ್ರತಿಭಟನೆ ನಡೆಸುವಂತೆ ಅವರಿಗೆ ಕುಮ್ಮಕ್ಕು ನೀಡಲಾಗುತ್ತಿದೆ’ ಎಂದು ತೋಮರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಕೇಂದ್ರ ಸರ್ಕಾರವು ಹರಿಹಾಯ್ದಿದೆ.ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಮತ್ತು ಈ ಪ್ರತಿಭಟನೆ ಬಗ್ಗೆ ಸಹಾನುಭೂತಿ ಉಳ್ಳವರು ಈ ಕಾಯ್ದೆಗಳ ಒಂದೇ ಒಂದು ಲೋಪವನ್ನು ಎತ್ತಿ ತೋರಿಸಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.</p>.<p>ರೈತರ ಭಾವನೆಗಳಿಗೆ ಸ್ಪಂದಿಸುವ ಕಾರಣಕ್ಕಾಗಿ ಮಾತ್ರ ಈ ಕಾಯ್ದೆಗಳಿಗೆ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿತ್ತೇ ವಿನಹ, ಅವು<br />ಗಳಲ್ಲಿ ಲೋಪ ಇದೆ ಎಂದಲ್ಲ ಎಂದು ತೋಮರ್ ಹೇಳಿದರು.</p>.<p>‘ಬೇಸಾಯ ಮಾಡಲು ನೀರು ಬೇಕು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ರಕ್ತವನ್ನು ಬಳಸಿಕೊಂಡು ಬೇಸಾಯ ಮಾಡುವುದು ಕಾಂಗ್ರೆಸ್ಗೆ ಮಾತ್ರ ಸಾಧ್ಯ. ಬಿಜೆಪಿಗೆ ಅದು ಸಾಧ್ಯವಿಲ್ಲ’ ಎಂದರು.</p>.<p>‘ಈ ಮೂರು ಕಾಯ್ದೆಗಳಲ್ಲಿ ಕರಾಳ ಏನಿದೆ ಎಂದು ನಾನು ರೈತ ಸಂಘಟನೆಗಳನ್ನು ಕಳೆದ ಎರಡು ತಿಂಗಳಿನಿಂದ ಕೇಳುತ್ತಲೇ ಇದ್ದೇನೆ. ಆದರೆ, ನನಗೆ ಉತ್ತರ ಸಿಕ್ಕಿಲ್ಲ. ಹಾಗೆಯೇ ಕಾಯ್ದೆಗಳಲ್ಲಿ ರೈತ ವಿರೋಧಿಯಾದದ್ದು ಏನಿದೆ ಎಂದು ಯಾರೂ ತೋರಿಸಿಕೊಟ್ಟಿಲ್ಲ’ ಎಂದು ತೋಮರ್ ಹೇಳಿದ್ದಾರೆ.</p>.<p>ರೈತರ ಪ್ರತಿಭಟನೆಯು 72ನೇ ದಿನ ಪೂರೈಸಿದೆ. ಪ್ರತಿಭಟನೆಯು ಈಗ ಬಿಜೆಪಿ ಆಳ್ವಿಕೆ ಇರುವ ಹರಿಯಾಣ ಮತ್ತು ಉತ್ತರ ಪ್ರದೇಶಕ್ಕೂ ವ್ಯಾಪಿಸಿದೆ. ಆದರೆ, ‘ಒಂದು ರಾಜ್ಯದ ರೈತರು ಮಾತ್ರ ಪ್ರತಿಭಟಿ<br />ಸುತ್ತಿದ್ದಾರೆ.ಪ್ರತಿಭಟನೆ ನಡೆಸುವಂತೆ ಅವರಿಗೆ ಕುಮ್ಮಕ್ಕು ನೀಡಲಾಗುತ್ತಿದೆ’ ಎಂದು ತೋಮರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>