ಪ್ರತಿಭಟನೆ ಕೈಬಿಡುವಂತೆ ಸ್ಥಳೀಯರು, ಸ್ಥಳೀಯ ಆಡಳಿತ ಹಾಗೂ ಕೇಂದ್ರ ಸರ್ಕಾರ ರೈತರ ಮೇಲೆ ಒತ್ತಡ ಹೇರುತ್ತಿವೆ. ಆದರೆ, ರೈತ ಸಂಘಟನೆಗಳು ಹೋರಾಟವನ್ನು ಮತ್ತಷ್ಟು ವಿಸ್ತರಿಸುವುದಾಗಿ ಕರೆ ಕೊಟ್ಟಿವೆ. ಈ ನಡುವೆ ರೈತರಿಗೆ ನೀರು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗಿದೆ ಎಂದು ಆರೋಪ ಕೇಳಿಬರುತ್ತಿವೆ. ಪರಿಸ್ಥಿತಿ ನಿಯಂತ್ರಿಸುವ ಕಾರಣವನ್ನು ನೀಡಿ ಕೇಂದ್ರ ಸರ್ಕಾರ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿದೆ.