ಶುಕ್ರವಾರ ಮಧ್ಯಾಹ್ನ, ಬುರಾರಿಯ ನಿರಂಕಾರಿ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುವ ದೆಹಲಿ ಪೊಲೀಸರ ಪ್ರಸ್ತಾವವನ್ನು ರೈತರು ಒಪ್ಪಿಲ್ಲ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಚಲೋ ಆರಂಭಿಸಿರುವ ವಿವಿಧ ರೈತ ಸಂಘಟನೆಗಳ ಸಾವಿರಾರು ರೈತರು ದೆಹಲಿಯ ಸಿಂಘು ಗಡಿಯಲ್ಲಿ ಮೂರು ದಿನಗಳಿಂದ ಬೀಡುಬಿಟ್ಟಿದ್ದಾರೆ.