ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ, ಉಭಯ ನಾಯಕರಿಗೆ ನಮಗಳನ್ನು ಸಲ್ಲಿಸಿ ವಿಡಿಯೊ ಮೂಲಕ ಸಂದೇಶ ನೀಡಿದ ಅವರು, ‘ಮಹಾತ್ಮ ಗಾಂಧೀಜಿ, ರೈತರು ಸೇರಿದಂತೆ ಎಲ್ಲ ದುಡಿಯುವ ವರ್ಗದ ಬಗ್ಗೆ ಸಹಾನುಭೂತಿ ಉಳ್ಳವರಾಗಿದ್ದರು. ಶಾಸ್ತ್ರಿಯವರು ‘ಜೈಜವಾನ್, ಜೈ ಕಿಸಾನ್‘ ಎಂಬ ಘೋಷಣೆ ನೀಡಿದ್ದಾರೆ‘ ಎಂದು ಇಬ್ಬರು ಮಹಾತ್ಮರ ರೈತ ಪ್ರೀತಿಯನ್ನು ನೆನಪಿಸಿಕೊಂಡರು.