<p><span style="font-size:20px;"><strong>ನವದೆಹಲಿ: </strong>ಹೊಸ ಕೃಷಿ ಮಸೂದೆಗಳ ತಿದ್ದುಪಡಿ ಕುರಿತಂತೆ ಸಲಹೆಗಳನ್ನ ಪಡೆಯುವುದಾಗಿ ನಿನ್ನೆ ಕೇಂದ್ರ ಸರ್ಕಾರ ಹೇಳಿದ್ದರೂ ಸಹ ಪಟ್ಟು ಬಿಡದ ರೈತ ಸಂಘಟನೆಗಳು ಹೊಸ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಪ್ರತಿಭಟನೆ ಮುಂದುವರೆಸಿವೆ. </span></p>.<p><span style="font-size:20px;">ಈ ಮಧ್ಯೆ, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿದ್ದು, ಡಿ. 8ಕ್ಕೆ ಭಾರತ ಬಂದ್ಗೆ ರೈತರು ಕರೆ ನೀಡಿದ್ದಾರೆ. ಸಭೆ ಬಳಿಕ ರೈತ ಮುಖಂಡ ಲಡಕ್ವಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇತ್ತ, 7 ಗಂಟೆಗಳ ಮ್ಯಾರಥಾನ್ ಮಾತುಕತೆ ಬಳಿಕ ನಾಳೆ ಮತ್ತೆ ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನೇತೃತ್ವದ ಸಚಿವರ ಸಮಿತಿ ಜೊತೆ ಮಾತುಕತೆ ನಡೆಸಲು 40 ರೈತ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ. </span></p>.<p><span style="font-size:20px;">ಕಳೆದ 9 ದಿನಗಳಿಂದ ರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಇದೀಗ ಮತ್ತಷ್ಟು ಸಂಘಟನೆಗಳು ಬೆಂಬಲ ಸೂಚಿಸಿವೆ.</span></p>.<p><span style="font-size:20px;">ರೈತರು ರಾಜಧಾನಿಗೆ ತೆರಳದಂತೆ ತಡೆಯದ ಹರಿಯಾಣ ಸರ್ಕಾರ ದೊಡ್ಡ ತಪ್ಪು ಮಾಡಿದೆ ಎಂದು ಹರಿಯಾಣ ವಿಪಕ್ಷ ನಾಯಕ ಬಿ.ಎಸ್. ಹೂಡಾ ಟೀಕಿಸಿದ್ದಾರೆ. ರೈತರು ದೆಹಲಿ ಪ್ರವೇಶಿಸುವ ಸಂದರ್ಭ ಹರಿಯಾಣ ಸರ್ಕಾರ ಅಶ್ರುವಾಯು, ಜಲಫಿರಂಗಿ ಪ್ರಯೋಗ ಮಾಡಲಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</span></p>.<p><span style="font-size:20px;">ಇತ್ತ, ಸರ್ಕಾರ ಕೂಡಲೇ ಹೊಸ ಕೃಷಿ ಕಾಯ್ದೆಗಳನ್ನ ಹಿಂಪಡೆಯಬೇಕು ಮತ್ತು ರೈತರನ್ನ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕ್ಷಮೆ ಯಾಚಿಸಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.</span></p>.<p><span style="font-size:20px;">ಒಂದೊಮ್ಮೆ ಸರ್ಕಾರ, ರೈತರ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಹೋದಲಿ ದ್ರೋಣಾಚಾರ್ಯ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಭಾರತದ ಮಾಜಿ ಬಾಕ್ಸಿಂಗ್ ಕೋಚ್ ಗುರ್ಬಾಕ್ಸ್ ಸಿಂಗ್ ಸಂಧು ಎಚ್ಚರಿಕೆ ನೀಡಿದ್ದಾರೆ.</span></p>.<p><span style="font-size:20px;">ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಪ್ರತಿಭಟನಾ ನಿರತ ರೈತರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size:20px;"><strong>ನವದೆಹಲಿ: </strong>ಹೊಸ ಕೃಷಿ ಮಸೂದೆಗಳ ತಿದ್ದುಪಡಿ ಕುರಿತಂತೆ ಸಲಹೆಗಳನ್ನ ಪಡೆಯುವುದಾಗಿ ನಿನ್ನೆ ಕೇಂದ್ರ ಸರ್ಕಾರ ಹೇಳಿದ್ದರೂ ಸಹ ಪಟ್ಟು ಬಿಡದ ರೈತ ಸಂಘಟನೆಗಳು ಹೊಸ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಪ್ರತಿಭಟನೆ ಮುಂದುವರೆಸಿವೆ. </span></p>.<p><span style="font-size:20px;">ಈ ಮಧ್ಯೆ, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿದ್ದು, ಡಿ. 8ಕ್ಕೆ ಭಾರತ ಬಂದ್ಗೆ ರೈತರು ಕರೆ ನೀಡಿದ್ದಾರೆ. ಸಭೆ ಬಳಿಕ ರೈತ ಮುಖಂಡ ಲಡಕ್ವಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇತ್ತ, 7 ಗಂಟೆಗಳ ಮ್ಯಾರಥಾನ್ ಮಾತುಕತೆ ಬಳಿಕ ನಾಳೆ ಮತ್ತೆ ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನೇತೃತ್ವದ ಸಚಿವರ ಸಮಿತಿ ಜೊತೆ ಮಾತುಕತೆ ನಡೆಸಲು 40 ರೈತ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ. </span></p>.<p><span style="font-size:20px;">ಕಳೆದ 9 ದಿನಗಳಿಂದ ರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಇದೀಗ ಮತ್ತಷ್ಟು ಸಂಘಟನೆಗಳು ಬೆಂಬಲ ಸೂಚಿಸಿವೆ.</span></p>.<p><span style="font-size:20px;">ರೈತರು ರಾಜಧಾನಿಗೆ ತೆರಳದಂತೆ ತಡೆಯದ ಹರಿಯಾಣ ಸರ್ಕಾರ ದೊಡ್ಡ ತಪ್ಪು ಮಾಡಿದೆ ಎಂದು ಹರಿಯಾಣ ವಿಪಕ್ಷ ನಾಯಕ ಬಿ.ಎಸ್. ಹೂಡಾ ಟೀಕಿಸಿದ್ದಾರೆ. ರೈತರು ದೆಹಲಿ ಪ್ರವೇಶಿಸುವ ಸಂದರ್ಭ ಹರಿಯಾಣ ಸರ್ಕಾರ ಅಶ್ರುವಾಯು, ಜಲಫಿರಂಗಿ ಪ್ರಯೋಗ ಮಾಡಲಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</span></p>.<p><span style="font-size:20px;">ಇತ್ತ, ಸರ್ಕಾರ ಕೂಡಲೇ ಹೊಸ ಕೃಷಿ ಕಾಯ್ದೆಗಳನ್ನ ಹಿಂಪಡೆಯಬೇಕು ಮತ್ತು ರೈತರನ್ನ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕ್ಷಮೆ ಯಾಚಿಸಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.</span></p>.<p><span style="font-size:20px;">ಒಂದೊಮ್ಮೆ ಸರ್ಕಾರ, ರೈತರ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಹೋದಲಿ ದ್ರೋಣಾಚಾರ್ಯ ಪ್ರಶಸ್ತಿಯನ್ನ ಹಿಂದಿರುಗಿಸುವುದಾಗಿ ಭಾರತದ ಮಾಜಿ ಬಾಕ್ಸಿಂಗ್ ಕೋಚ್ ಗುರ್ಬಾಕ್ಸ್ ಸಿಂಗ್ ಸಂಧು ಎಚ್ಚರಿಕೆ ನೀಡಿದ್ದಾರೆ.</span></p>.<p><span style="font-size:20px;">ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಪ್ರತಿಭಟನಾ ನಿರತ ರೈತರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>