ಈ ಮಧ್ಯೆ, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿದ್ದು, ಡಿ. 8ಕ್ಕೆ ಭಾರತ ಬಂದ್ಗೆ ರೈತರು ಕರೆ ನೀಡಿದ್ದಾರೆ. ಸಭೆ ಬಳಿಕ ರೈತ ಮುಖಂಡ ಲಡಕ್ವಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇತ್ತ, 7 ಗಂಟೆಗಳ ಮ್ಯಾರಥಾನ್ ಮಾತುಕತೆ ಬಳಿಕ ನಾಳೆ ಮತ್ತೆ ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನೇತೃತ್ವದ ಸಚಿವರ ಸಮಿತಿ ಜೊತೆ ಮಾತುಕತೆ ನಡೆಸಲು 40 ರೈತ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ.