ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ಮೇಲೆೆ ಗುಂಡಿನ ದಾಳಿ ನಡೆಸಿ ಗಣರಾಜ್ಯೋತ್ಸವದ ದಿನದ ಟ್ರ್ಯಾಕ್ಟರ್ ರ್ಯಾಲಿಗೆ ಅಡ್ಡಿಯುಂಟುಮಾಡುವ ಸಂಚು ರೂಪಿಸಿದ್ದ ವ್ಯಕ್ತಿಯೊಬ್ಬನನ್ನು ರೈತರೇ ಹಿಡಿದಿದ್ದಾರೆ.
ಜನವರಿ 22 ರಂದು ಅಪರಿಚಿತ ವ್ಯಕ್ತಿಯನ್ನು ಹಿಡಿದು ರೈತರು ಪೊಲೀಸರಿಗೆ ಒಪ್ಪಿಸಿದ್ದಾರೆ.
#WATCH | Delhi: Farmers at Singhu border present a person who alleges a plot to shoot four farmer leaders and cause disruption; says there were plans to cause disruption during farmers' tractor march on Jan 26. pic.twitter.com/FJzikKw2Va
ಪೊಲೀಸ್ ಸಮವಸ್ತ್ರ ಧರಿಸಿ ನಾಲ್ವರು ರೈತ ಮುಖಂಡರ ಮೇಲೆ ಗುಂಡಿನ ದಾಳಿ ನಡೆಸಿ ರ್ಯಾಲಿಗೆ ಅಡ್ಡಿಯುಂಟು ಮಾಡುವ ಪಿತೂರಿ ನಡೆಸಿದ್ದಾಗಿ ಬಂಧಿತ ಆರೋಪಿ ಹೇಳಿದ್ದಾನೆ. ಹರಿಯಾಣದ ರಾಯ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಈ ಯೋಜನೆ ಕಾರ್ಯಗತಗೊಳಿಸಲು ನಮಗೆ ತರಬೇತಿ ನೀಡಿದ್ದಾರೆ ಎಂದು ಆರೋಪಿ ಹೇಳಿರುವುದಾಗಿಯೂ ತಿಳಿದುಬಂದಿದೆ.
Delhi: The person who revealed an alleged plot to shoot four farmer leaders and cause disruption during farmers' tractor march on January 26 has been handed over to police. pic.twitter.com/ABNLo12JME
ಕಳೆದ ಸರಿ ಸುಮಾರು ಒಂದೂವರೆ ತಿಂಗಳಿಂದ ರೈತರು ಚಳಿ, ಮಳೆ–ಗಾಳಿ ಲೆಕ್ಕಿಸದೆ ಮೂರೂ ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ಮತ್ತು ಸರ್ಕಾರದ ನಡುವೆ 11 ಸುತ್ತಿನ ಸಂಧಾನ ಮಾತುಕತೆಗಳು ನಡೆದಿವೆ.
ಈ ಮಧ್ಯೆ, ಜನವರಿ 26ರಂದು ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಪ್ರತಿಭಟನೆ ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ.