ಕೃಷಿ ಕಾಯ್ದೆಗಳ ವಿರುದ್ಧ ಡಿಎಂಕೆ ಸಂಸದ ತಿರುಚಿ ಶಿವ ಅವರು ಈಗಾಗಲೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈಗ ರೈತ ಸಂಘಟನೆಯ ಅಧ್ಯಕ್ಷ ಭಾನು ಪ್ರತಾಪ್ ಸಿಂಗ್ ಅವರು ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಿದ್ದಾರೆ. ‘ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ– 2020’, ‘ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಕಾಯ್ದೆ–2020’ ಹಾಗೂ ‘ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ–2020’ ವಿರುದ್ಧ ಅರ್ಜಿ ಸಲ್ಲಿಕೆಯಾಗಿದೆ.