<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ಸಿಂಧುತ್ವ ಪ್ರಶ್ನಿಸಿ ‘ಭಾರತೀಯ ಕಿಸಾನ್ ಯೂನಿಯನ್’ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.</p>.<p>ಕೃಷಿ ಕಾಯ್ದೆಗಳ ವಿರುದ್ಧ ಡಿಎಂಕೆ ಸಂಸದ ತಿರುಚಿ ಶಿವ ಅವರು ಈಗಾಗಲೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈಗ ರೈತ ಸಂಘಟನೆಯ ಅಧ್ಯಕ್ಷ ಭಾನು ಪ್ರತಾಪ್ ಸಿಂಗ್ ಅವರು ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಿದ್ದಾರೆ. ‘ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ– 2020’, ‘ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಕಾಯ್ದೆ–2020’ ಹಾಗೂ ‘ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ–2020’ ವಿರುದ್ಧ ಅರ್ಜಿ ಸಲ್ಲಿಕೆಯಾಗಿದೆ.</p>.<p>‘ಹೊಸ ಕಾಯ್ದೆಗಳನ್ನು ಮುಂದುವರಿಯಲು ಬಿಟ್ಟಲ್ಲಿ ಕಾರ್ಪೊರೇಟ್ ಕಂಪನಿಗಳಿಗೆ ನಮ್ಮ ದೇಶವನ್ನು ಹಾಳು ಮಾಡಲು ಅನುವು ಮಾಡಿಕೊಟ್ಟಂತಾಗಬಹುದು. ಅವರು ನಮ್ಮ ಕೃಷಿ ಉತ್ಪನ್ನಗಳನ್ನು ನಿಯಂತ್ರಣವಿಲ್ಲದೆ ರಫ್ತು ಮಾಡಬಹುದು. ಇದರಿಂದ ದೇಶದಲ್ಲಿ ಬರ ಉಂಟಾಗಬಹುದು’ ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/farmers-protests-show-massive-lack-of-trust-in-govt-nobel-laureate-abhijit-banerjee-786258.html" itemprop="url">ರೈತರ ಪ್ರತಿಭಟನೆ ಸರ್ಕಾರದ ಮೇಲಿನ ನಂಬಿಕೆ ಕೊರತೆಯ ಸೂಚಕ: ಅಭಿಜಿತ್ ಬ್ಯಾನರ್ಜಿ</a></p>.<p>ಹೊಸ ಕಾಯ್ದೆಗಳು ಕಾನೂನುಬಾಹಿರವಾದವು ಮತ್ತು ಏಕಪಕ್ಷೀಯ ಎಂದಿರುವ ಸಂಘಟನೆಯು, ಕೃಷಿ ಉತ್ಪನ್ನಗಳ ವಾಣಿಜ್ಯೀಕರಣಕ್ಕೆ ಅವು ಆಸ್ಪದ ಮಾಡಿಕೊಡುತ್ತವೆ ಎಂದು ಹೇಳಿದೆ.</p>.<p>ಹೊಸ ಕೃಷಿ ಕಾಯ್ದೆಗಳು ಅಸಾಂವಿಧಾನಿಕ ಮತ್ತು ರೈತ ವಿರೋಧಿಯಾಗಿವೆ. ಈ ಕಾಯ್ದೆಗಳು ರೈತರನ್ನು ಕಾರ್ಪೊರೇಟ್ ಕಂಪನಿಗಳ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳುಗಳನ್ನಾಗಿ ಮಾಡಲಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>‘ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಸ್ಥಾಪನೆಯಾಗಿರುವ ಎಪಿಎಂಸಿ ವ್ಯವಸ್ಥೆಯನ್ನು ಈ ಕಾಯ್ದೆಗಳು ಅಸ್ತಿತ್ವ ಕಳೆದುಕೊಳ್ಳುವಂತೆ ಮಾಡುತ್ತವೆ. ಈ ಕಾಯ್ದೆಗಳನ್ನು ತರಾತುರಿಯಲ್ಲಿ ಅಂಗೀಕರಿಸಲಾಗಿದೆ’ ಎಂದೂ ಉಲ್ಲೇಖಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/pm-modi-urges-farmers-to-hear-narendra-tomar-piyush-goyal-out-on-farm-laws-786205.html" itemprop="url">ರೈತರು ನರೇಂದ್ರ ತೋಮರ್, ಪೀಯೂಷ್ ಗೋಯಲ್ ಮಾತುಗಳನ್ನು ಕೇಳಿ: ಪ್ರಧಾನಿ ಮೋದಿ ಮನವಿ</a></p>.<p>ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿ ತಿರುಚಿ ಶಿವ, ಆರ್ಜೆಡಿ ಸಂಸದ ಮನೋಜ್ ಝಾ ಹಾಗೂ ಇತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಈಗಾಗಲೇ ನೋಟಿಸ್ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ಸಿಂಧುತ್ವ ಪ್ರಶ್ನಿಸಿ ‘ಭಾರತೀಯ ಕಿಸಾನ್ ಯೂನಿಯನ್’ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.</p>.<p>ಕೃಷಿ ಕಾಯ್ದೆಗಳ ವಿರುದ್ಧ ಡಿಎಂಕೆ ಸಂಸದ ತಿರುಚಿ ಶಿವ ಅವರು ಈಗಾಗಲೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈಗ ರೈತ ಸಂಘಟನೆಯ ಅಧ್ಯಕ್ಷ ಭಾನು ಪ್ರತಾಪ್ ಸಿಂಗ್ ಅವರು ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಿದ್ದಾರೆ. ‘ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ– 2020’, ‘ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಕಾಯ್ದೆ–2020’ ಹಾಗೂ ‘ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ–2020’ ವಿರುದ್ಧ ಅರ್ಜಿ ಸಲ್ಲಿಕೆಯಾಗಿದೆ.</p>.<p>‘ಹೊಸ ಕಾಯ್ದೆಗಳನ್ನು ಮುಂದುವರಿಯಲು ಬಿಟ್ಟಲ್ಲಿ ಕಾರ್ಪೊರೇಟ್ ಕಂಪನಿಗಳಿಗೆ ನಮ್ಮ ದೇಶವನ್ನು ಹಾಳು ಮಾಡಲು ಅನುವು ಮಾಡಿಕೊಟ್ಟಂತಾಗಬಹುದು. ಅವರು ನಮ್ಮ ಕೃಷಿ ಉತ್ಪನ್ನಗಳನ್ನು ನಿಯಂತ್ರಣವಿಲ್ಲದೆ ರಫ್ತು ಮಾಡಬಹುದು. ಇದರಿಂದ ದೇಶದಲ್ಲಿ ಬರ ಉಂಟಾಗಬಹುದು’ ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/farmers-protests-show-massive-lack-of-trust-in-govt-nobel-laureate-abhijit-banerjee-786258.html" itemprop="url">ರೈತರ ಪ್ರತಿಭಟನೆ ಸರ್ಕಾರದ ಮೇಲಿನ ನಂಬಿಕೆ ಕೊರತೆಯ ಸೂಚಕ: ಅಭಿಜಿತ್ ಬ್ಯಾನರ್ಜಿ</a></p>.<p>ಹೊಸ ಕಾಯ್ದೆಗಳು ಕಾನೂನುಬಾಹಿರವಾದವು ಮತ್ತು ಏಕಪಕ್ಷೀಯ ಎಂದಿರುವ ಸಂಘಟನೆಯು, ಕೃಷಿ ಉತ್ಪನ್ನಗಳ ವಾಣಿಜ್ಯೀಕರಣಕ್ಕೆ ಅವು ಆಸ್ಪದ ಮಾಡಿಕೊಡುತ್ತವೆ ಎಂದು ಹೇಳಿದೆ.</p>.<p>ಹೊಸ ಕೃಷಿ ಕಾಯ್ದೆಗಳು ಅಸಾಂವಿಧಾನಿಕ ಮತ್ತು ರೈತ ವಿರೋಧಿಯಾಗಿವೆ. ಈ ಕಾಯ್ದೆಗಳು ರೈತರನ್ನು ಕಾರ್ಪೊರೇಟ್ ಕಂಪನಿಗಳ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳುಗಳನ್ನಾಗಿ ಮಾಡಲಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>‘ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಸ್ಥಾಪನೆಯಾಗಿರುವ ಎಪಿಎಂಸಿ ವ್ಯವಸ್ಥೆಯನ್ನು ಈ ಕಾಯ್ದೆಗಳು ಅಸ್ತಿತ್ವ ಕಳೆದುಕೊಳ್ಳುವಂತೆ ಮಾಡುತ್ತವೆ. ಈ ಕಾಯ್ದೆಗಳನ್ನು ತರಾತುರಿಯಲ್ಲಿ ಅಂಗೀಕರಿಸಲಾಗಿದೆ’ ಎಂದೂ ಉಲ್ಲೇಖಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/pm-modi-urges-farmers-to-hear-narendra-tomar-piyush-goyal-out-on-farm-laws-786205.html" itemprop="url">ರೈತರು ನರೇಂದ್ರ ತೋಮರ್, ಪೀಯೂಷ್ ಗೋಯಲ್ ಮಾತುಗಳನ್ನು ಕೇಳಿ: ಪ್ರಧಾನಿ ಮೋದಿ ಮನವಿ</a></p>.<p>ಕೃಷಿ ಕಾಯ್ದೆಗಳನ್ನು ಪ್ರಶ್ನಿಸಿ ತಿರುಚಿ ಶಿವ, ಆರ್ಜೆಡಿ ಸಂಸದ ಮನೋಜ್ ಝಾ ಹಾಗೂ ಇತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಈಗಾಗಲೇ ನೋಟಿಸ್ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>