ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದ ಪ್ರತಿಭಟನಾನಿರತ ರೈತರು

ನವದಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟ್ರ್ಯಾಕ್ಟರ್ ರ್ಯಾಲಿ ಮೂಲಕ ಪ್ರತಿಭಟನೆಗೆ ಮುಂದಾಗಿರುವ ರೈತರು ಮಂಗಳವಾರ ಬೆಳಿಗ್ಗೆ ದೆಹಲಿ-ಹರಿಯಾಣ ಟಿಕ್ರಿ ಗಡಿಯಲ್ಲಿ ಪೊಲೀಸ್ ಬ್ಯಾರಿಕೇಡ್ಗಳನ್ನು ಮುರಿದಿದ್ದಾರೆ.
ಸಿಂಘು ಗಡಿಯಲ್ಲೂ ಇದೇ ರೀತಿಯ ವರದಿಗಳು ಬರುತ್ತಿವೆ, ಇಲ್ಲೂ ಸಹ ರೈತರ ಮತ್ತೊಂದು ಗುಂಪು ಬ್ಯಾರಿಕೇಡ್ಗಳನ್ನು ಮುರಿದಿದೆ.
ಈ ಎರಡು ಗಡಿ ಬಿಂದುಗಳಿಂದ ರೈತರು ದೆಹಲಿಯನ್ನು ಪ್ರವೇಶಿಸಿದ್ದಾರೆ. ಎಹಲಿ ಪೊಲೀಸರ ಜೊತೆ ಆಗಿದ್ದ ಒಪ್ಪಂದ ಮುರಿದು ರೈತರು ಬೆಳಗ್ಗೆ 8 ಗಂಟೆ ಸುಮಾರಿಗೆ ದೆಹಲಿ ಪ್ರವೇಶಿಸಿದ್ದಾರೆ.
#WATCH Protesting farmers break police barricading at Delhi-Haryana Tikri border
Farmers are holding tractor rally today in protest against Centre's three Farm Laws#RepublicDay pic.twitter.com/3tI7uKSSRM
— ANI (@ANI) January 26, 2021
ಸೋಮವಾರ, ದೆಹಲಿ ಪೊಲೀಸರು ರೈತರ ಮೆರವಣಿಗೆಗೆ 37 ಷರತ್ತುಗಳನ್ನು ನೀಡಿದ್ದರು. ಸಿಂಗು, ಟಿಕ್ರಿ, ಗಾಜಿಪುರ ಮತ್ತು ಚಿಲ್ಲಾ ನಾಲ್ಕು ಗಡಿಗಳಿಂದ ನಗರ ಪ್ರವೇಶಕ್ಕೆ ನಿಯಮಾವಳಿ ರೂಪಿಸಲಾಗಿತ್ತು.
ಗಣರಾಜ್ಯೋತ್ಸವದ ಪರೇಡ್ ಬಳಿಕ ರೈತರ ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಮಧ್ಯೆಯೇ ರೈತರು ಮತ್ತು ಪೊಲಿಸರ ನಡುವೆ ತಿಕ್ಕಾಟ ಏರ್ಪಟ್ಟಿದೆ. ಪಂಜಾಬ್ ಹರಿಯಾಣ ಸೇರಿದಂತೆ ಸುತ್ತಮುತ್ತಲ ರಾಜ್ಯಗಳಿಂದ ಲಕ್ಷಾಂತರ ರೈತರು ಟ್ರ್ಯಾಕ್ಟರ್ ಮೂಲಕ ದೆಹಲಿಗೆ ತೆರಳಿದ್ದಾರೆ.
ಗಣರಾಜ್ಯೋತ್ಸವದ ರಾಜ್ಪಾತ್ನಲ್ಲಿ ಆಹ್ವಾನಿತರು ಜಮಾಯಿಸುತ್ತಿದ್ದಂತೆಯೇ ದೆಹಲಿ ಪೊಲೀಸ್ ವಾಹನಗಳು ಪೂರ್ವನಿರ್ಧರಿತ ಮಾರ್ಗಗಳಿಗೆ ತೆರಳುವಂತ ರೈತರಿಗೆ ಸೂಚನೆ ನೀಡುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ.
ಇವುಗಳನ್ನೂ ಓದಿ
ಹಿಂಸಾಚಾರ ನಡೆಸಿದ್ದು ಯಾರು? ಸಾಮಾಜಿಕ ತಾಣಗಳಲ್ಲಿ ಚರ್ಚೆ
ಚಳವಳಿ ಕೆಡಿಸಲು ಸಮಾಜಘಾತುಕರ ಪಿತೂರಿ: ರೈತ ಸಂಘಟನೆಗಳ ಆಕ್ರೋಶ
ದೆಹಲಿ ಹಿಂಸಾಚಾರ| ವಿರೋಧ ಪಕ್ಷಗಳಲ್ಲಿ ತಳಮಳ
ಕೆಂಪು ಕೋಟೆ: ಪೊಲೀಸರನ್ನು ಇಕ್ಕಟ್ಟಿಗೆ ಸಿಲುಕಿಸಿ ಪ್ರತಿಭಟನಾಕಾರರ ಲಾಠಿ ಪ್ರಹಾರ!
ದೆಹಲಿ ಹಿಂಸಾಚಾರದಲ್ಲಿ 86 ಪೊಲೀಸ್ ಸಿಬ್ಬಂದಿಗೆ ಗಾಯ
ಕೆಂಪುಕೋಟೆಯಲ್ಲಿ ನಡೆದ ಘಟನೆ ವಿಷಾದಕರ: ಆರ್ಎಸ್ಎಸ್
ಟ್ರ್ಯಾಕ್ಟರ್ ಮಗುಚಿ ಒಬ್ಬ ರೈತ ಸಾವು; ದೆಹಲಿಯ ಹಲವೆಡೆ ಇಂಟರ್ನೆಟ್ ಸ್ಥಗಿತ
ದೆಹಲಿ ಕೆಂಪುಕೋಟೆ ಪ್ರವೇಶಿಸಿದ ರೈತರು, ಕೋಟೆ ಮೇಲೆ ಧ್ವಜಾರೋಹಣ
Video: ಬೆಂಗಳೂರಿನತ್ತ ನೂರಾರು ಟ್ರಾಕ್ಟರ್ನಲ್ಲಿ ಆಗಮಿಸುತ್ತಿರುವ ರೈತರು
Photos: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ
ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ...
VIDEO: ಬೆಂಗಳೂರಲ್ಲಿ ನೃತ್ಯ ಮಾಡಿ ರೈತರ ಪ್ರತಿಭಟನೆ
ಟ್ರ್ಯಾಕ್ಟರ್ ರ್ಯಾಲಿ| ಕೆಂಪುಕೋಟೆಗೆ ರೈತರ ಲಗ್ಗೆ: ಹಿಂಸೆಗೆ ತಿರುಗಿದ ಹೋರಾಟ
ಕಲಬುರ್ಗಿಯಲ್ಲಿ 300ಕ್ಕೂ ಹೆಚ್ಚು ಟ್ರ್ಯಾಕ್ಟರ್ ರ್ಯಾಲಿ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.