ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ದೇಶದಾದ್ಯಂತ ನಡೆದ ಚಕ್ಕಾ ಜಾಮ್‌ ಅಂತ್ಯ
LIVE

ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಠಿಕಾಣಿ ಹೂಡಿರುವ ರೈತರು ಇಂದು ದೇಶವ್ಯಾಪಿ 'ಚಕ್ಕಾ ಜಾಮ್‌' ಪ್ರತಿಭಟನೆಗೆ ಕರೆ ನೀಡಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12 ರಿಂದ 3ರ ನಡುವೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡಲು ರೈತರು ನಿರ್ಧರಿಸಿದ್ದಾರೆ. ಜನವರಿ 26 ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ್ದ ಟ್ರ್ಯಾಕ್ಟರ್ ಪೆರೇಡ್‌, ಹಿಂಸಾಚಾರಕ್ಕೆ ತಿರುಗಿತ್ತು. ಹೀಗಾಗಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿಯಲ್ಲಿ ರೈತರ ಸಂಚಾರವನ್ನು ತಡೆಯಲು ರಸ್ತೆಗಳಲ್ಲಿ ಮೊಳೆ, ಕಾಂಕ್ರೀಟ್ ಬ್ಯಾರಿಕೇಡ್ ಹಾಗೂ ತಂತಿಗಳನ್ನು ಸ್ಥಾಪಿಸಲಾಗಿದೆ. ಗಾಜಿಪುರ, ಟಿಕ್ರಿ ಹಾಗೂ ಸಿಂಘು ಗಡಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
Last Updated 6 ಫೆಬ್ರುವರಿ 2021, 17:42 IST
ಅಕ್ಷರ ಗಾತ್ರ
13:2706 Feb 2021

ದೆಹಲಿ ಗಡಿಯಲ್ಲಿ ಭದ್ರತೆ ಮುಂದುವರಿಕೆ

13:2406 Feb 2021

ಚಕ್ಕಾ ಜಾಮ್‌ ಅಂತ್ಯ

ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಇಂದು ದೇಶದಾದ್ಯಂತ ನಡೆದ ಚಕ್ಕಾ ಜಾಮ್‌ ಅಂತ್ಯವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಹೊರ ವಲಯದಲ್ಲಿ ನಿಯೋಜಿಸಲಾಗಿರುವ ಭದ್ರತೆ ಇನ್ನೂ ಮುಂದುವರಿದಿದೆ. 

12:3806 Feb 2021

ಕಲ್ಬುರ್ಗಿ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ

12:3706 Feb 2021

ಮಂಗಳೂರು–ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ

11:2306 Feb 2021

ರೈತರಿಂದ ಚಕ್ಕಾ ಜಾಮ್‌: ದೆಹಲಿಯ ಗಡಿಗಳಲ್ಲಿ ಮತ್ತೆ ಇಂಟರ್ನೆಟ್‌ ಸ್ಥಗಿತ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಗಡಿ ಪ್ರದೇಶಗಳಲ್ಲಿ ಇಂಟರ್ನೆಟ್‌ ಸೇವೆಯನ್ನು ಮತ್ತೊಮ್ಮೆ ಕಡಿತಗೊಳಿಸಲಾಗಿದೆ. 

ರೈತರು ದೇಶದಾದ್ಯಂತ 'ಚಕ್ಕಾ ಜಾಮ್‌' ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು (ಫೆಬ್ರುವರಿ 06) ರಾತ್ರಿ 11:59 ಗಂಟೆ ವರೆಗೂ ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 

09:5906 Feb 2021

ರೈತರ ಹೋರಾಟದ ಹಿಂದೆ 'ಅಂತರರಾಷ್ಟ್ರೀಯ ಪಿತೂರಿ' ಆರೋಪಕ್ಕೆ‌ ಟಿಕಾಯತ್‌ ಆಕ್ರೋಶ

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಹೋರಾಟದ ಹಿಂದೆ ಅಂತರರಾಷ್ಟ್ರೀಯ ಪಿತೂರಿ ಇದೆ ಎಂಬ ಆರೋಪವನ್ನು ರೈತ ನಾಯಕ ರಾಕೇಶ್‌ ಟಿಕಾಯತ್‌ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. 

ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಟಿಕಾಯತ್‌, 'ಯಾವ ಅಂತರರಾಷ್ಟ್ರೀಯ ಪಿತೂರಿ? ಯಾವ ಮಾನಹಾನಿ? ರೈತರು ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆ ಕೇಳುತ್ತಿದ್ದಾರೆ. ಇದು ಭಾರತಕ್ಕೆ ಕೆಟ್ಟ ಹೆಸರು ತಂದಂತೆ ಆಗುತ್ತದೆಯೇ? ಬೆಂಬಲ ಬೆಲೆ ಕಾಯ್ದೆ ಇದ್ದರೆ ಮಾತ್ರ ರೈತರ ಬೆಳೆಗೆ ಸರಿಯಾದ ಬೆಲೆ ಸಿಗುತ್ತದೆ. ಬೆಂಬಲ ಬೆಲೆ ಪ್ರಕ್ರಿಯೆ ಇಲ್ಲದಿರುವುದೇ ಒಂದು ದೊಡ್ಡ ಪಿತೂರಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

09:2506 Feb 2021

ತುಮಕೂರಿನಲ್ಲಿ ಚಕ್ಕಾ ಜಾಮ್ ಪ್ರತಿಭಟನೆ

09:1906 Feb 2021

ಮಂಗಳೂರು–ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ

ಹಾಸನ: ಕೇಂದ್ರ ಸರ್ಕಾರ  ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿ  ರೈತ, ದಲಿತ, ಕಾರ್ಮಿಕ ಸಂಘಟನೆ ಸದಸ್ಯರು ಶನಿವಾರ ಮಂಗಳೂರು–ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.‌

09:0206 Feb 2021

ಹೊಸಪೇಟೆ-ಕಂಪ್ಲಿ‌ ಹೆದ್ದಾರಿಯಲ್ಲಿ ಪ್ರತಿಭಟನೆ

ಹೊಸಪೇಟೆ-ಕಂಪ್ಲಿ‌ ಹೆದ್ದಾರಿಯಲ್ಲಿ ರೈತರು ರಸ್ತೆತಡೆ ಚಳವಳಿ‌ ನಡೆಸುತ್ತಿದ್ದಾರೆ.

08:5806 Feb 2021

ಪ್ರತಿಭಟನಕಾರರ ಬಂಧನ

ಮೈಸೂರಿನ ಬೆಂಗಳೂರು ನೀಲಗಿರಿ ರಸ್ತೆ ತಡೆದು ಐಕ್ಯ ಹೋರಾಟ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಸ್ತೆಯಲ್ಲೆ ಅಡುಗೆ ಮಾಡಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿದರು‌.