ಲಖಿಂಪುರ ಖೇರಿ ಹಿಂಸಾಚಾರ: ರೈತರಿಗೆ ನ್ಯಾಯ ದೊರೆಯುವ ಭರವಸೆ ಇದೆ ಎಂದ ಟಿಕಾಯತ್

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವುದು ರೈತರಲ್ಲಿ ನ್ಯಾಯ ದೊರೆಯುವ ಭರವಸೆ ಮೂಡಿಸಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಉತ್ತರ ಪ್ರದೇಶ ಸರ್ಕಾರ ಈಗ ನೊಂದ ರೈತರಿಗೆ ಭದ್ರತೆ, ಪರಿಹಾರ ಮತ್ತು ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಲಖಿಂಪುರ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ರದ್ದು, ಶರಣಾಗಲು 'ಸುಪ್ರೀಂ' ಆದೇಶ
‘ಆಶಿಶ್ ಮಿಶ್ರಾ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವುದು ರೈತರಲ್ಲಿ ಆಶಾವಾದ ಮೂಡಿಸಿದೆ. ಉತ್ತರ ಪ್ರದೇಶ ಸರ್ಕಾರವೀಗ ನೊಂದ ರೈತರ ಪರ ಕೆಲಸ ಮಾಡಬೇಕು. ಮುಗ್ದ ರೈತರನ್ನು ಜೈಲುಗಳಿಂದ ಬಿಡುಗಡೆ ಮಾಡಬೇಕು. ಪೂರ್ತಿ ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಯಲಿದೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
सुप्रीमकोर्ट द्वारा मंत्री पुत्र आशीष की जमानत रद्द करने से किसानों को न्याय की उम्मीद जगी है। @upgovernment पीड़ित किसानों की सुरक्षा-मुआवजा-न्याय दिलाने का काम करे। बेगुनाह किसानों को जेल से निकलवाए। पूर्णन्याय मिलने तक संघर्ष जारी रहेगा।#FARMERSJUSTICE @ANI @PTI @NDTV @NEWS24 pic.twitter.com/ZGbbrpcKLI
— Rakesh Tikait (@RakeshTikaitBKU) April 18, 2022
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಮಿಶ್ರಾ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿಕೊಳ್ಳುವಂತೆ ಸೂಚಿಸಿದೆ. ಜತೆಗೆ, ಪ್ರಕರಣದ ವಿಚಾರಣೆಯನ್ನು ಪುನಃ ಆರಂಭಿಸುವಂತೆ ಅಲಹಾಬಾದ್ ಹೈಕೋರ್ಟ್ಗೆ ನಿರ್ದೇಶಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.