ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಹತ್ಯೆ: ಹಾನಿ ತಡೆಗೆ ಮೋದಿ ಯತ್ನ

Last Updated 20 ಅಕ್ಟೋಬರ್ 2021, 19:05 IST
ಅಕ್ಷರ ಗಾತ್ರ

ಕುಶಿನಗರ/ಲಖನೌ: ಲಖಿಂಪುರ-ಖೇರಿಯಲ್ಲಿ ಕೇಂದ್ರ ಸಚಿವರ ಕಾರು ಹರಿಸಿ, ರೈತರ ಹತ್ಯೆಯ ಪರಿಣಾಮವು ಚುನಾವಣೆಯ ಮೇಲೆ ಆಗುವುದನ್ನು ತಡೆಯಲು ಮೋದಿ ಅವರು ಪ‍್ರಯತ್ನಿಸಿದ್ಧಾರೆ. ರೈತರಿಗಾಗಿ ಸರ್ಕಾರ ಏನೇನು ಮಾಡಿದೆ ಎಂಬ ಪಟ್ಟಿಯನ್ನು ಜನರ ಮುಂದೆ ಇಟ್ಟಿದ್ದಾರೆ

‘ಕೇಂದ್ರ ಮತ್ತು ರಾಜ್ಯ ಸರ್ಕಾರವು ರೈತರ ಉತ್ಪನ್ನಗಳನ್ನು ಖರೀದಿಸುವಲ್ಲಿ ದಾಖಲೆ ನಿರ್ಮಿಸಿವೆ. ಕೃಷಿ ಉತ್ಪನ್ನಗಳ ಖರೀದಿ ಮೂಲಕ ಎರಡೂ ಸರ್ಕಾರಗಳು ಉತ್ತರ ಪ್ರದೇಶದ ರೈತರ ಖಾತೆಗಳಿಗೆ ಒಟ್ಟು ₹80,000 ಕೋಟಿ ಹಣ ವರ್ಗಾವಣೆ ಮಾಡಿವೆ. ಪಿಎಂ ಕಿಸಾನ್ ಸಮ್ಮಾನ್‌ ನಿಧಿ ಯೋಜನೆ ಅಡಿ ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ₹37,000 ಕೋಟಿಗೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಮೋದಿ ಅವರು ವಿವರಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಶೇ 40ರಷ್ಟು ಟಿಕೆಟ್‌ಗಳನ್ನು ಮಹಿಳೆಯರಿಗೆ ಮೀಸಲಿರಿಸುವ ಕಾಂಗ್ರೆಸ್‌ನ ಘೋಷಣೆಗೂ ಪ್ರಧಾನಿ ಮೋದಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

‘ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರವು ಮಹತ್ವದ ಹೆಜ್ಜೆಗಳನ್ನು ಇರಿಸಿದೆ. ರಾಜ್ಯದಲ್ಲಿ ಈಚೆಗೆ ನೋಂದಣಿಯಾದ ಹೊಸ ಮನೆಗಳಲ್ಲಿ, ಬಹುಪಾಲು ಮನೆಗಳು ಮಹಿಳೆಯರ ಹೆಸರಿನಲ್ಲೇ ಇವೆ. ಬಡವರಿಗೆ ಪಕ್ಕಾ ಮನೆ, ಶೌಚಾಲಯ, ವಿದ್ಯುತ್ ಸಂಪರ್ಕ, ಎಲ್‌ಪಿಜಿ ಸಂಪರ್ಕ ದೊರೆತರೆ ಅವರ ಆತ್ಮವಿಶ್ವಾಸ ವೃದ್ಧಿಸುತ್ತದೆ. ಈ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT