ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು , ‘ಕೃಷಿ ಸಮುದಾಯ ಮತ್ತು ರಾಷ್ಟ್ರದ ಹಿತ ದೃಷ್ಟಿಯಿಂದ ಅಮಿತ್ ಶಾ ಅವರು ತ್ವರಿತಗತಿಯಲ್ಲಿ ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆ ನಡೆಸಲು ಒಪ್ಪಿದ್ದಾರೆ‘ ಎಂದು ಹೇಳಿದರು. ಅವರು ಶನಿವಾರ ರೈತರಿಂದ ಮನವಿಯನ್ನು ಸ್ವೀಕರಿಸಿ, ಸರ್ಕಾರ ನಿಗದಿಗೊಳಿಸಿರುವ ಸ್ಥಳಕ್ಕೆ ತಮ್ಮ ಪ್ರತಿಭಟನೆಯನ್ನು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು.