ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ವರೆಗೆ ಪ್ರತಿಭಟನೆಯನ್ನು ಕೈಬಿಡದೆ ಅಚಲವಾಗಿ ಉಳಿಯಲು ರೈತರು ನಿರ್ಧರಿಸಿದ್ದಾರೆ. ಸಿಂಘು ಬಾರ್ಡರ್ನಲ್ಲಿ ಬೀಡುಬಿಟ್ಟಿರುವ ರೈತರು ಕೊರೊನಾ ಸಂಕಷ್ಟ, ಲಾಕ್ಡೌನ್ ಸವಾಲು, ಮೈಕೊರೆಯುವ ಚಳಿ, ಬಿರು ಬಿಸಿಲು, ಪೊಲೀಸರ ಒತ್ತಡ ಯಾವುದಕ್ಕೂ ಜಗ್ಗದೆ ಹೋರಾಟ ನಡೆಸುತ್ತಿದ್ದಾರೆ.