ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ದೇಶದ ಗಡಿಯಲ್ಲಿ ಅವರ (ರೈತರ) ಮಕ್ಕಳು ಪ್ರಾಣವನ್ನೇ ಪಣಕ್ಕಿಟ್ಟು ಗಡಿ ಕಾಯುತ್ತಿದ್ದಾರೆ. ಅತ್ತ ದೆಹಲಿ ಗಡಿಯಲ್ಲಿ ಮೊಳೆಯನ್ನು ಹಾಕಲಾಗಿದೆ. ಅನ್ನದಾತರು ತಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದಾರೆ. ಸರ್ಕಾರವು ಅವರ ಮೇಲೆ ದೌರ್ಜನ್ಯವನ್ನು ಎಸಗುತ್ತಿದೆ ಎಂದು ಟೀಕಿಸಿದರು.