‘ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರದ್ದು ರಾಷ್ಟ್ರಮಟ್ಟದಲ್ಲಿ ಸ್ವತಂತ್ರ ವರ್ಚಸ್ಸು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಏಕಾಂಗಿ ಹೋರಾಟ ನಡೆಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ದೇಶದ ಪ್ರತಿಪಕ್ಷವು ಅವರ ಜತೆ ನಿಲ್ಲಬೇಕಿದೆ. ಮಮತಾ ಅವರು ಪವಾರ್ ಅವರನ್ನು ಮಾತ್ರ ಸಂಪರ್ಕಿಸಿದ್ದು, ಅವರು ಬಂಗಾಳಕ್ಕೆ ತೆರಳಲಿದ್ದಾರೆ. ಆದರೆ, ಇದು ಕಾಂಗ್ರೆಸ್ ನೇತೃತ್ವದಲ್ಲಿ ಆಗಬೇಕಿತ್ತು’ ಎಂದು ಸೇನಾ ಹೇಳಿದೆ.