ರೈತರ ಮಹಾಪಂಚಾಯಿತಿ ಅಂಗವಾಗಿ ನೂರಾರು ರೈತರು ಲಖನೌದಲ್ಲಿ ಸೇರಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಖಾತರಿ ಮತ್ತು ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ಅಜಯ್ ಮಿಶ್ರಾ ಮಗನನ್ನು ಬಂಧಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರ್ಷವಿಡೀ ನಡೆದ ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬದವರಿಗೆ ಪರಿಹಾರ, ರೈತರ ವಿರುದ್ಧದ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ಆಗ್ರಹಿಸುವ ವಿಷಯಗಳೂ ಮಹಾಪಂಚಾಯಿತಿಯಲ್ಲಿ ಚರ್ಚೆಗೆ ಬರಲಿವೆ.