ಕೇಜ್ರಿವಾಲ್ ಬೆಂಬಲ: ಸೋಮವಾರ ಇಡೀ ದಿನ ಉಪವಾಸವಿದ್ದು ರೈತರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ‘ಕೇಂದ್ರ ಸರ್ಕಾರವು ದುರಹಂಕಾರವನ್ನು ತ್ಯಜಿಸಿ, ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು. ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಗೊಳಿಸುವ ಮಸೂದೆಯನ್ನು ಮಂಡಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.