<p><strong>ಮುಂಬೈ:</strong> ಪ್ರಮುಖವಾದ ರಾಜಕೀಯ ಬೆಳವಣಿಗೆಯೊಂದರಲ್ಲಿ ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ಯಾವುದೇ ಒತ್ತಡಕ್ಕೊಳಗಾಗಿ ತಾರೆಗಳು ಟ್ವೀಟ್ ಮಾಡಿದ್ದಾರೆಯೇ ಎಂಬುದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲು ಮಹಾರಾಷ್ಟ್ರದ ಕಾಂಗ್ರೆಸ್-ಶಿವಸೇನಾ ಮೈತ್ರಿ ಸರ್ಕಾರ ಆದೇಶಿಸಿದೆ.</p>.<p>ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಆಘಾಡಿ (ಎಂವಿಎ) ಸರ್ಕಾರದ ಈ ಕ್ರಮವನ್ನು ತರಾಟೆಗೆ ತೆಗೆದುಕೊಂಡಿರುವ ಭಾರತೀಯ ಜನತಾ ಪಕ್ಷವು (ಬಿಜೆಪಿ), ತೀವ್ರ ವಾಗ್ದಾಳಿ ನಡೆಸಿದೆ.</p>.<p>ಕೇಂದ್ರ ಸರ್ಕಾರದ ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ರಿಯಾನಾ ಸೇರಿದಂತೆ ವಿದೇಶಿ ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದರು.</p>.<p>ವಿದೇಶಿಯರ ಅಪ ಪ್ರಚಾರದ ವಿರುದ್ಧ ಭಾರತದ ಏಕತೆಗಾಗಿ ಟ್ವೀಟ್ ಮಾಡಿದ್ದವರಲ್ಲಿ ದೇಶದ ಅತ್ಯುನ್ನತ್ತ ನಾಗರಿಕ 'ಭಾರತ ರತ್ನ' ಪ್ರಶಸ್ತಿ ಪುರಸ್ಕೃತ ಸಚಿನ್ ತೆಂಡೂಲ್ಕರ್, ಗಾನ ಕೋಗಿಲೆ ಲತಾ ಮಂಗೇಶ್ಕರ್ ಮುಂತಾದವರು ಸೇರಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/india-needs-to-be-protected-from-foreign-destructive-ideology-pm-modi-803444.html" itemprop="url">ವಿದೇಶಿ ವಿನಾಶಕಾರಿ ಸಿದ್ಧಾಂತ, ಆಂದೋಲನ ಜೀವಿಗಳಿಂದ ದೇಶ ರಕ್ಷಿಸಬೇಕಿದೆ: ಮೋದಿ </a></p>.<p>ಕೇಂದ್ರದ ಆಡಳಿತರೂಢ ಬಿಜೆಪಿ ಸರ್ಕಾರವು ಉದ್ದೇಶಪೂರ್ವಕವಾಗಿ ಒತ್ತಡವನ್ನು ಹೇರಿ ತಾರೆಗಳಿಂದ ಟ್ವೀಟ್ ಮಾಡಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಸಂಬಂಧ ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್ ದೇಶಮುಖ್ ತನಿಖೆಗೆ ಆದೇಶಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿರುವ ದೇಶಮುಖ್ ನಾಗ್ಪುರದ ಮನೆಯಲ್ಲಿ ಕ್ವಾರಂಟೈನ್ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ತಾರೆಗಳ ಟ್ವೀಟ್ ವಿರುದ್ಧ ಮಹಾರಾಷ್ಟ್ರ ಸರ್ಕಾರದ ತನಿಖೆ ಆದೇಶವನ್ನು ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್ ಖಂಡಿಸಿದ್ದು, ಅಸಹ್ಯವೆನಿಸುವ ಕ್ರಮ ಎಂದು ಟೀಕಿಸಿದ್ದಾರೆ.</p>.<p>ಮರಾಠಿಗರ ಬಗ್ಗೆ ನಿಮ್ಮ ಹೆಮ್ಮೆಯೀಗ ಎಲ್ಲಿದೆ? ಮಹಾರಾಷ್ಟ್ರದ ಧರ್ಮ ಎಲ್ಲಿದೆ? ನಮ್ಮ ರಾಷ್ಟ್ರದ ಹಿತಕ್ಕಾಗಿ ಸದಾ ಒಂದೇ ಧ್ವನಿಯಲ್ಲಿ ನಿಂತಿರುವ ನೈಜ ಭಾರತ ರತ್ನಗಳ ವಿರುದ್ಧ ತನಿಖೆ ನಡೆಸಲು ಆದೇಶಿಸಿರುವ ಇಂತಹ ರತ್ನಗಳು ದೇಶದಲ್ಲಿ ಎಲ್ಲಿ ಸಿಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಪ್ರಮುಖವಾದ ರಾಜಕೀಯ ಬೆಳವಣಿಗೆಯೊಂದರಲ್ಲಿ ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ಯಾವುದೇ ಒತ್ತಡಕ್ಕೊಳಗಾಗಿ ತಾರೆಗಳು ಟ್ವೀಟ್ ಮಾಡಿದ್ದಾರೆಯೇ ಎಂಬುದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲು ಮಹಾರಾಷ್ಟ್ರದ ಕಾಂಗ್ರೆಸ್-ಶಿವಸೇನಾ ಮೈತ್ರಿ ಸರ್ಕಾರ ಆದೇಶಿಸಿದೆ.</p>.<p>ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಆಘಾಡಿ (ಎಂವಿಎ) ಸರ್ಕಾರದ ಈ ಕ್ರಮವನ್ನು ತರಾಟೆಗೆ ತೆಗೆದುಕೊಂಡಿರುವ ಭಾರತೀಯ ಜನತಾ ಪಕ್ಷವು (ಬಿಜೆಪಿ), ತೀವ್ರ ವಾಗ್ದಾಳಿ ನಡೆಸಿದೆ.</p>.<p>ಕೇಂದ್ರ ಸರ್ಕಾರದ ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ರಿಯಾನಾ ಸೇರಿದಂತೆ ವಿದೇಶಿ ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದರು.</p>.<p>ವಿದೇಶಿಯರ ಅಪ ಪ್ರಚಾರದ ವಿರುದ್ಧ ಭಾರತದ ಏಕತೆಗಾಗಿ ಟ್ವೀಟ್ ಮಾಡಿದ್ದವರಲ್ಲಿ ದೇಶದ ಅತ್ಯುನ್ನತ್ತ ನಾಗರಿಕ 'ಭಾರತ ರತ್ನ' ಪ್ರಶಸ್ತಿ ಪುರಸ್ಕೃತ ಸಚಿನ್ ತೆಂಡೂಲ್ಕರ್, ಗಾನ ಕೋಗಿಲೆ ಲತಾ ಮಂಗೇಶ್ಕರ್ ಮುಂತಾದವರು ಸೇರಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/india-needs-to-be-protected-from-foreign-destructive-ideology-pm-modi-803444.html" itemprop="url">ವಿದೇಶಿ ವಿನಾಶಕಾರಿ ಸಿದ್ಧಾಂತ, ಆಂದೋಲನ ಜೀವಿಗಳಿಂದ ದೇಶ ರಕ್ಷಿಸಬೇಕಿದೆ: ಮೋದಿ </a></p>.<p>ಕೇಂದ್ರದ ಆಡಳಿತರೂಢ ಬಿಜೆಪಿ ಸರ್ಕಾರವು ಉದ್ದೇಶಪೂರ್ವಕವಾಗಿ ಒತ್ತಡವನ್ನು ಹೇರಿ ತಾರೆಗಳಿಂದ ಟ್ವೀಟ್ ಮಾಡಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಸಂಬಂಧ ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್ ದೇಶಮುಖ್ ತನಿಖೆಗೆ ಆದೇಶಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿರುವ ದೇಶಮುಖ್ ನಾಗ್ಪುರದ ಮನೆಯಲ್ಲಿ ಕ್ವಾರಂಟೈನ್ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ತಾರೆಗಳ ಟ್ವೀಟ್ ವಿರುದ್ಧ ಮಹಾರಾಷ್ಟ್ರ ಸರ್ಕಾರದ ತನಿಖೆ ಆದೇಶವನ್ನು ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್ ಖಂಡಿಸಿದ್ದು, ಅಸಹ್ಯವೆನಿಸುವ ಕ್ರಮ ಎಂದು ಟೀಕಿಸಿದ್ದಾರೆ.</p>.<p>ಮರಾಠಿಗರ ಬಗ್ಗೆ ನಿಮ್ಮ ಹೆಮ್ಮೆಯೀಗ ಎಲ್ಲಿದೆ? ಮಹಾರಾಷ್ಟ್ರದ ಧರ್ಮ ಎಲ್ಲಿದೆ? ನಮ್ಮ ರಾಷ್ಟ್ರದ ಹಿತಕ್ಕಾಗಿ ಸದಾ ಒಂದೇ ಧ್ವನಿಯಲ್ಲಿ ನಿಂತಿರುವ ನೈಜ ಭಾರತ ರತ್ನಗಳ ವಿರುದ್ಧ ತನಿಖೆ ನಡೆಸಲು ಆದೇಶಿಸಿರುವ ಇಂತಹ ರತ್ನಗಳು ದೇಶದಲ್ಲಿ ಎಲ್ಲಿ ಸಿಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>