<p><strong>ಅಮೃತಸರ:</strong> ಕೃಷಿ ಕ್ಷೇತ್ರಕ್ಕೆ ಅಸಮರ್ಪಕ ವಿದ್ಯುತ್ ಪೂರೈಕೆಯನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಪಂಜಾಬ್ ಇಂಧನ ಸಚಿವ ಹರ್ಭಜನ್ ಸಿಂಗ್ ಅವರ ನಿವಾಸದೆದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಅಮೃತಸರದಲ್ಲಿರುವ ಸಚಿವರ ಮನೆ ಮುಂದೆ ಹೆಚ್ಚಿನ ಬ್ಯಾರಿಕೇಡ್ಗಳನ್ನು ಹಾಕಲಾಗಿತ್ತು.</p>.<p>ಬ್ಯಾರಿಕೇಡ್ಗಳನ್ನು ದಾಟಿ ಸಚಿವರ ಮನೆ ಕಡೆಗೆ ತೆರಳಲು ಯತ್ನಿಸಿದಾಗ ಕಿಸಾನ್ ಮಜದೂರ್ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯಿತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಳಿಕ ಪ್ರತಿಭಟನಾಕಾರರು ಸಚಿವರ ಮನೆ ಬಳಿ ತಾತ್ಕಾಲಿಕ ವೇದಿಕೆ ನಿರ್ಮಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಗುರುವಾರ, ಪಂಜಾಬ್ನ ವಿರೋಧ ಪಕ್ಷಗಳು ಬಿಸಿಲಿನ ಶಾಖದ ನಡುವೆ ರಾಜ್ಯದ ಹಲವೆಡೆ ಉಂಟಾಗುತ್ತಿರುವ ವಿದ್ಯುತ್ ಕಡಿತದ ಬಗ್ಗೆ ಆಮ್ ಆದ್ಮಿ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಜನರಿಗೆ ರಾತ್ರಿಯಿಡೀ ವಿದ್ಯುತ್ ನೀಡುವ ಭರವಸೆಯನ್ನು ಈಡೇರಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.</p>.<p>ಏರುತ್ತಿರುವ ತಾಪಮಾನದಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವಿದ್ಯುತ್ ಬೇಡಿಕೆಯು ಶೇ 40 ರಷ್ಟು ಹೆಚ್ಚಾಗಿದೆ ಎಂದು ಸಿಂಗ್ ಈ ಹಿಂದೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೃತಸರ:</strong> ಕೃಷಿ ಕ್ಷೇತ್ರಕ್ಕೆ ಅಸಮರ್ಪಕ ವಿದ್ಯುತ್ ಪೂರೈಕೆಯನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಪಂಜಾಬ್ ಇಂಧನ ಸಚಿವ ಹರ್ಭಜನ್ ಸಿಂಗ್ ಅವರ ನಿವಾಸದೆದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಅಮೃತಸರದಲ್ಲಿರುವ ಸಚಿವರ ಮನೆ ಮುಂದೆ ಹೆಚ್ಚಿನ ಬ್ಯಾರಿಕೇಡ್ಗಳನ್ನು ಹಾಕಲಾಗಿತ್ತು.</p>.<p>ಬ್ಯಾರಿಕೇಡ್ಗಳನ್ನು ದಾಟಿ ಸಚಿವರ ಮನೆ ಕಡೆಗೆ ತೆರಳಲು ಯತ್ನಿಸಿದಾಗ ಕಿಸಾನ್ ಮಜದೂರ್ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯಿತು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಳಿಕ ಪ್ರತಿಭಟನಾಕಾರರು ಸಚಿವರ ಮನೆ ಬಳಿ ತಾತ್ಕಾಲಿಕ ವೇದಿಕೆ ನಿರ್ಮಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಗುರುವಾರ, ಪಂಜಾಬ್ನ ವಿರೋಧ ಪಕ್ಷಗಳು ಬಿಸಿಲಿನ ಶಾಖದ ನಡುವೆ ರಾಜ್ಯದ ಹಲವೆಡೆ ಉಂಟಾಗುತ್ತಿರುವ ವಿದ್ಯುತ್ ಕಡಿತದ ಬಗ್ಗೆ ಆಮ್ ಆದ್ಮಿ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಜನರಿಗೆ ರಾತ್ರಿಯಿಡೀ ವಿದ್ಯುತ್ ನೀಡುವ ಭರವಸೆಯನ್ನು ಈಡೇರಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.</p>.<p>ಏರುತ್ತಿರುವ ತಾಪಮಾನದಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವಿದ್ಯುತ್ ಬೇಡಿಕೆಯು ಶೇ 40 ರಷ್ಟು ಹೆಚ್ಚಾಗಿದೆ ಎಂದು ಸಿಂಗ್ ಈ ಹಿಂದೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>