<p><strong>ನವದೆಹಲಿ:</strong> ಕೃಷಿ ಕಾಯ್ದೆಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 12ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರವು ಡಿಸೆಂಬರ್ 9ರಂದು ಮತ್ತೊಂದು ಸುತ್ತಿನ ಮಾತುಕತೆಗೆ ರೈತರನ್ನು ಆಹ್ವಾನಿಸಿದೆ.</p>.<p>ದೆಹಲಿ–ಹರಿಯಾಣದ ಸಿಂಘು ಗಡಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಹಾಗೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/farmer-protest-gets-support-from-all-over-country-opposition-parties-support-bharat-bandh-785092.html" itemprop="url">ರೈತರ ಪ್ರತಿಭಟನೆ ಪರ ದೇಶದಾದ್ಯಂತ ದನಿ: ‘ಬಂದ್’ಗೆ ಭಾರಿ ಬೆಂಬಲ</a></p>.<p>ಈ ಮಧ್ಯೆ, ರೈತರು ನಾಳೆ (ಡಿ.8) ದೇಶದಾದ್ಯಂತ ಬಂದ್ಗೆ ಕರೆ ನೀಡಿದ್ದಾರೆ. ಕಾಂಗ್ರೆಸ್ ಸೇರಿದಂತೆ ಬಹುತೇಕ ಎಲ್ಲ ಪ್ರತಿಪಕ್ಷಗಳೂ ಬಂದ್ಗೆ ಬೆಂಬಲ ಘೋಷಿಸಿವೆ.</p>.<p><strong>ದೆಹಲಿಯ ಆಟೊ, ಟ್ಯಾಕ್ಸಿ ಸಂಘಟನೆ ಬೆಂಬಲ:</strong> ರೈತರು ಕರೆ ನೀಡಿರುವ ’ಭಾರತ ಬಂದ್’ಗೆ ದೆಹಲಿಯ ಕೆಲವು ಆಟೊ, ಟ್ಯಾಕ್ಸಿ ಸಂಘಟನೆಗಳು ಬೆಂಬಲ ಸೂಚಿಸಿವೆ. ಇತರ ಕೆಲವು ಸಂಘಟನೆಗಳು ಎಂದಿನಂತೆಯೇ ಕಾರ್ಯನಿರ್ವಹಿಸಲು ನಿರ್ಧರಿಸಿವೆ.</p>.<p>ಈ ಮಧ್ಯೆ, ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಪ್ರದೇಶಕ್ಕೆ ಭೇಟಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿ ಸಂಪುಟದ ಇತರ ಕೆಲವು ಸಚಿವರೂ ಕೇಜ್ರಿವಾಲ್ ಜತೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೃಷಿ ಕಾಯ್ದೆಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 12ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರವು ಡಿಸೆಂಬರ್ 9ರಂದು ಮತ್ತೊಂದು ಸುತ್ತಿನ ಮಾತುಕತೆಗೆ ರೈತರನ್ನು ಆಹ್ವಾನಿಸಿದೆ.</p>.<p>ದೆಹಲಿ–ಹರಿಯಾಣದ ಸಿಂಘು ಗಡಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಹಾಗೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/farmer-protest-gets-support-from-all-over-country-opposition-parties-support-bharat-bandh-785092.html" itemprop="url">ರೈತರ ಪ್ರತಿಭಟನೆ ಪರ ದೇಶದಾದ್ಯಂತ ದನಿ: ‘ಬಂದ್’ಗೆ ಭಾರಿ ಬೆಂಬಲ</a></p>.<p>ಈ ಮಧ್ಯೆ, ರೈತರು ನಾಳೆ (ಡಿ.8) ದೇಶದಾದ್ಯಂತ ಬಂದ್ಗೆ ಕರೆ ನೀಡಿದ್ದಾರೆ. ಕಾಂಗ್ರೆಸ್ ಸೇರಿದಂತೆ ಬಹುತೇಕ ಎಲ್ಲ ಪ್ರತಿಪಕ್ಷಗಳೂ ಬಂದ್ಗೆ ಬೆಂಬಲ ಘೋಷಿಸಿವೆ.</p>.<p><strong>ದೆಹಲಿಯ ಆಟೊ, ಟ್ಯಾಕ್ಸಿ ಸಂಘಟನೆ ಬೆಂಬಲ:</strong> ರೈತರು ಕರೆ ನೀಡಿರುವ ’ಭಾರತ ಬಂದ್’ಗೆ ದೆಹಲಿಯ ಕೆಲವು ಆಟೊ, ಟ್ಯಾಕ್ಸಿ ಸಂಘಟನೆಗಳು ಬೆಂಬಲ ಸೂಚಿಸಿವೆ. ಇತರ ಕೆಲವು ಸಂಘಟನೆಗಳು ಎಂದಿನಂತೆಯೇ ಕಾರ್ಯನಿರ್ವಹಿಸಲು ನಿರ್ಧರಿಸಿವೆ.</p>.<p>ಈ ಮಧ್ಯೆ, ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿ ಪ್ರದೇಶಕ್ಕೆ ಭೇಟಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿ ಸಂಪುಟದ ಇತರ ಕೆಲವು ಸಚಿವರೂ ಕೇಜ್ರಿವಾಲ್ ಜತೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>