ರೈತರ ಪ್ರತಿಭಟನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕಳೆದ ವರ್ಷದ ಡಿಸೆಂಬರ್ 17ರಂದು ವಿಚಾರಣೆ ನಡೆಸಿದ್ದ ಪೀಠವು, ಸಾರ್ವಜನಿಕ ಸುವ್ಯವಸ್ಥೆಗೆ ತೊಂದರೆ ಆಗದಂತೆ ಪ್ರತಿಭಟನೆ ನಡೆಸುವುದು ರೈತರ ಹಕ್ಕು ಎಂದು ಹೇಳಿತ್ತು. ಬಿಕ್ಕಟ್ಟು ಪರಿಹಾರಕ್ಕೆ ಮಾತುಕತೆ ನಡೆಯಬೇಕು ಎಂದು ಸೂಚಿಸಿತ್ತು. ಸಮಸ್ಯೆಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ಸ್ವತಂತ್ರ
ಸಮಿತಿಯೊಂದನ್ನು ತಾನೇ ರಚಿಸುವುದಾಗಿಯೂ ಹೇಳಿತ್ತು.