ಬಿಜೆಪಿಯ ದೆಹಲಿ ಘಟಕದ ‘ಕಿಸಾನ್ ಮೋರ್ಚಾ’ ಆಯೋಜಿಸಿದ್ದ ‘ಕಿಸಾನ್ ಪಂಚಾಯತ್’ನಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅದೇಶ್ ಗುಪ್ತ, ದೆಹಲಿ ವಿಧಾನಸಭೆಯ ಪ್ರತಿಪಕ್ಷ ನಾಯಕ ರಾಮ್ವೀರ್ ಸಿಂಗ್ ಬಿಧುರಿ, ಪಶ್ಚಿಮ ದೆಹಲಿ ಸಂಸದ ಪರ್ವೇಶ್ ವರ್ಮಾ ಭಾಗವಹಿಸಿ ರೈತರ ಜೊತೆ ಸಂವಾದ ನಡೆಸಿದ್ದಾರೆ. ಹೊಸ ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಲು ಯತ್ನಿಸಿದ್ದಾರೆ.