ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಾದ ಸ್ಥಳವನ್ನು ಬದಲಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ವಿಶ್ವವಿದ್ಯಾಲಯವೊಂದರ ಬಳಿ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿತ್ತು. ರೋಹ್ಟಕ್ ಸಂಸದ ಅರವಿಂದ್ ಶರ್ಮಾ ಅವರ ತಂದೆಯ ಗೌರವಾರ್ಥ ಏರ್ಪಡಿಸಲಾಗಿದ್ದ ಸಂತಾಪಸೂಚಕ ಸಭೆಯಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಬೇಕಿತ್ತು. ಅದೇ ಪ್ರದೇಶದಲ್ಲಿ ಜಮಾಯಿಸಿದ್ದ ರೈತರು ಪ್ರತಿಭಟನೆಗೆ ಮುಂದಾಗಿದ್ದರು.
ಮುಖ್ಯಮಂತ್ರಿಗಳು ಬರುವ ಕಾರಣ ಬಿಗಿಬಂದೋಬಸ್ತ್ ಕಲ್ಪಿಸಲಾಗಿತ್ತು. ಬ್ಯಾರಿಕೇಡ್ಗಳನ್ನು ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಬ್ಯಾರಿಕೇಡ್ಗಳನ್ನು ತೆರವುಗೊಳಿಸಿ ರೈತರು ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.