<p><strong>ಚಂಡೀಗಡ:</strong> ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರ ಮೇಲೆ ಹರಿಯಾಣದ ರೋಹ್ಟಕ್ನಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.</p>.<p>ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲವು ರೈತರೂ ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾನಿರತರು ಹೇಳಿಕೊಂಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/district/shivamogga/farmer-leader-rakesh-tikait-farm-bills-farmers-protest-818962.html" itemprop="url">ರಾಕೇಶ್ ಟಿಕಾಯತ್ ಮೇಲಿನ ಗುಂಡಿನ ದಾಳಿಗೆ ಐಕ್ಯ ಹೋರಾಟ ಸಮಿತಿ ಖಂಡನೆ</a></p>.<p>ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಾದ ಸ್ಥಳವನ್ನು ಬದಲಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಖಾಸಗಿ ವಿಶ್ವವಿದ್ಯಾಲಯವೊಂದರ ಬಳಿ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿತ್ತು. ರೋಹ್ಟಕ್ ಸಂಸದ ಅರವಿಂದ್ ಶರ್ಮಾ ಅವರ ತಂದೆಯ ಗೌರವಾರ್ಥ ಏರ್ಪಡಿಸಲಾಗಿದ್ದ ಸಂತಾಪಸೂಚಕ ಸಭೆಯಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಬೇಕಿತ್ತು. ಅದೇ ಪ್ರದೇಶದಲ್ಲಿ ಜಮಾಯಿಸಿದ್ದ ರೈತರು ಪ್ರತಿಭಟನೆಗೆ ಮುಂದಾಗಿದ್ದರು.</p>.<p>ಮುಖ್ಯಮಂತ್ರಿಗಳು ಬರುವ ಕಾರಣ ಬಿಗಿಬಂದೋಬಸ್ತ್ ಕಲ್ಪಿಸಲಾಗಿತ್ತು. ಬ್ಯಾರಿಕೇಡ್ಗಳನ್ನು ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಬ್ಯಾರಿಕೇಡ್ಗಳನ್ನು ತೆರವುಗೊಳಿಸಿ ರೈತರು ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.</p>.<p><strong>ನೋಡಿ:</strong><a href="https://www.prajavani.net/video/district/belagavi/farmers-protest-enter-belagavi-farm-bills-central-government-818246.html" itemprop="url">ಳಗಾವಿಗೆ ಕಾಲಿಟ್ಟ ರೈತ ಚಳವಳಿಯ ಕಿಚ್ಚು</a></p>.<p>ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರ ಮೇಲೆ ಹರಿಯಾಣದ ರೋಹ್ಟಕ್ನಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.</p>.<p>ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲವು ರೈತರೂ ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾನಿರತರು ಹೇಳಿಕೊಂಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/district/shivamogga/farmer-leader-rakesh-tikait-farm-bills-farmers-protest-818962.html" itemprop="url">ರಾಕೇಶ್ ಟಿಕಾಯತ್ ಮೇಲಿನ ಗುಂಡಿನ ದಾಳಿಗೆ ಐಕ್ಯ ಹೋರಾಟ ಸಮಿತಿ ಖಂಡನೆ</a></p>.<p>ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಾದ ಸ್ಥಳವನ್ನು ಬದಲಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಖಾಸಗಿ ವಿಶ್ವವಿದ್ಯಾಲಯವೊಂದರ ಬಳಿ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿತ್ತು. ರೋಹ್ಟಕ್ ಸಂಸದ ಅರವಿಂದ್ ಶರ್ಮಾ ಅವರ ತಂದೆಯ ಗೌರವಾರ್ಥ ಏರ್ಪಡಿಸಲಾಗಿದ್ದ ಸಂತಾಪಸೂಚಕ ಸಭೆಯಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಬೇಕಿತ್ತು. ಅದೇ ಪ್ರದೇಶದಲ್ಲಿ ಜಮಾಯಿಸಿದ್ದ ರೈತರು ಪ್ರತಿಭಟನೆಗೆ ಮುಂದಾಗಿದ್ದರು.</p>.<p>ಮುಖ್ಯಮಂತ್ರಿಗಳು ಬರುವ ಕಾರಣ ಬಿಗಿಬಂದೋಬಸ್ತ್ ಕಲ್ಪಿಸಲಾಗಿತ್ತು. ಬ್ಯಾರಿಕೇಡ್ಗಳನ್ನು ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಬ್ಯಾರಿಕೇಡ್ಗಳನ್ನು ತೆರವುಗೊಳಿಸಿ ರೈತರು ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.</p>.<p><strong>ನೋಡಿ:</strong><a href="https://www.prajavani.net/video/district/belagavi/farmers-protest-enter-belagavi-farm-bills-central-government-818246.html" itemprop="url">ಳಗಾವಿಗೆ ಕಾಲಿಟ್ಟ ರೈತ ಚಳವಳಿಯ ಕಿಚ್ಚು</a></p>.<p>ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>