ರೈತರು ಹಾಗೂ ಸರ್ಕಾರದ ಪ್ರತಿನಿಧಿಗಳ ನಡುವೆ 11ನೇ ಸುತ್ತಿನ ಮಾತುಕತೆ ಶುಕ್ರವಾರಕ್ಕೆ ನಿಗದಿಯಾಗಿದೆ. ಇದಕ್ಕೂ ಮುನ್ನಾದಿನ ನಡೆದ ರೈತ ಮೋರ್ಚಾದ ಸುದೀರ್ಘ ಅವಧಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಗಣರಾಜ್ಯೋತ್ಸವ ದಿನದಂದು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ಜಾಥಾದ ಮಾರ್ಗವನ್ನು ಬದಲಾಯಿಸಲು ದೆಹಲಿ ಪೊಲೀಸರು ಮುಂದಿಟ್ಟ ಸಲಹೆಗಳನ್ನು ಒಕ್ಕೂಟ ತಿರಸ್ಕರಿಸಿದಾಗಲೇ ಈ ಸಭೆಯ ಫಲಿತಾಂಶದ ಮುನ್ಸೂಚನೆ ಸಿಕ್ಕಿತ್ತು.