<p><strong>ಕರ್ನಾಲ್ (ಉತ್ತರ ಪ್ರದೇಶ)</strong>: ಆಗಸ್ಟ್ 28ರಂದು ಕರ್ನಾಲ್ನಲ್ಲಿ ಪ್ರತಿಭಟನಕಾರರ ಮೇಲೆ ಲಾಠಿಪ್ರಹಾರ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬುಧವಾರವೂ ಮುಂದುವರಿದಿದೆ.</p>.<p>ಮಂಗಳವಾರ ಸಂಜೆ ಸ್ಥಳೀಯ ಆಡಳಿತದೊಂದಿಗೆ ನಡೆದ ಮಾತುಕತೆ ವಿಫಲವಾದ ನಂತರ, ಪ್ರತಿಭಟನನಿರತ ರೈತರು ಸಂಯುಕ್ತ ಕಿಸಾನ್ ಮೋರ್ಚಾದ (ಎಸ್ಕೆಎಂ) ಕೆಲವು ನಾಯಕರೊಂದಿಗೆ ಮಿನಿ-ಸೆಕ್ರೆಟರಿಯೇಟ್ನ ಮುಖ್ಯ ದ್ವಾರದ ಹೊರಗೆ ರಾತ್ರಿ ಕಳೆದರು.</p>.<p>ಬುಧವಾರ ಬೆಳಿಗ್ಗೆ, ಸ್ವಯಂಸೇವಕರು ಪ್ರತಿಭಟನನಿರತ ರೈತರಿಗೆ ಚಹಾ ಉಪಾಹಾರ ನೀಡಿದರು. ‘ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಾವು ಇಲ್ಲಿಂದ ಹೋಗುವುದಿಲ್ಲ‘ ಎಂದು ಹರಿಯಾಣ ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ಗುರ್ನಾಮ್ ಸಿಂಗ್ ಚದುನಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ರೈತರ ತಲೆ ಉರುಳಿಸುವ’ ಹೇಳಿಕೆ ನೀಡಿದ್ದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕಿಸಾನ್ ಸಂಯುಕ್ತ ಮೋರ್ಚಾ ಸಂಘಟನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಯಿಂದಾಗಿ ಹರಿಯಾಣ ಸರ್ಕಾರ ಆಯುಷ್ ಸಿನ್ಹಾ ಅವರನ್ನು ವರ್ಗಾವಣೆ ಮಾಡಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/punjab-cm-amarinder-singh-to-cook-lavish-meal-for-olympians-864959.html" target="_blank"><strong>ಒಲಿಂಪಿಕ್ಸ್ ಪದಕ ವಿಜೇತರ ಔತಣಕೂಟಕ್ಕೆ ಪಂಜಾಬ್ ಮುಖ್ಯಮಂತ್ರಿಯೇ ಬಾಣಸಿಗ!</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರ್ನಾಲ್ (ಉತ್ತರ ಪ್ರದೇಶ)</strong>: ಆಗಸ್ಟ್ 28ರಂದು ಕರ್ನಾಲ್ನಲ್ಲಿ ಪ್ರತಿಭಟನಕಾರರ ಮೇಲೆ ಲಾಠಿಪ್ರಹಾರ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬುಧವಾರವೂ ಮುಂದುವರಿದಿದೆ.</p>.<p>ಮಂಗಳವಾರ ಸಂಜೆ ಸ್ಥಳೀಯ ಆಡಳಿತದೊಂದಿಗೆ ನಡೆದ ಮಾತುಕತೆ ವಿಫಲವಾದ ನಂತರ, ಪ್ರತಿಭಟನನಿರತ ರೈತರು ಸಂಯುಕ್ತ ಕಿಸಾನ್ ಮೋರ್ಚಾದ (ಎಸ್ಕೆಎಂ) ಕೆಲವು ನಾಯಕರೊಂದಿಗೆ ಮಿನಿ-ಸೆಕ್ರೆಟರಿಯೇಟ್ನ ಮುಖ್ಯ ದ್ವಾರದ ಹೊರಗೆ ರಾತ್ರಿ ಕಳೆದರು.</p>.<p>ಬುಧವಾರ ಬೆಳಿಗ್ಗೆ, ಸ್ವಯಂಸೇವಕರು ಪ್ರತಿಭಟನನಿರತ ರೈತರಿಗೆ ಚಹಾ ಉಪಾಹಾರ ನೀಡಿದರು. ‘ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಾವು ಇಲ್ಲಿಂದ ಹೋಗುವುದಿಲ್ಲ‘ ಎಂದು ಹರಿಯಾಣ ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ಗುರ್ನಾಮ್ ಸಿಂಗ್ ಚದುನಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ರೈತರ ತಲೆ ಉರುಳಿಸುವ’ ಹೇಳಿಕೆ ನೀಡಿದ್ದ ಐಎಎಸ್ ಅಧಿಕಾರಿ ಆಯುಷ್ ಸಿನ್ಹಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಕಿಸಾನ್ ಸಂಯುಕ್ತ ಮೋರ್ಚಾ ಸಂಘಟನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಯಿಂದಾಗಿ ಹರಿಯಾಣ ಸರ್ಕಾರ ಆಯುಷ್ ಸಿನ್ಹಾ ಅವರನ್ನು ವರ್ಗಾವಣೆ ಮಾಡಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/punjab-cm-amarinder-singh-to-cook-lavish-meal-for-olympians-864959.html" target="_blank"><strong>ಒಲಿಂಪಿಕ್ಸ್ ಪದಕ ವಿಜೇತರ ಔತಣಕೂಟಕ್ಕೆ ಪಂಜಾಬ್ ಮುಖ್ಯಮಂತ್ರಿಯೇ ಬಾಣಸಿಗ!</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>