ತೆಂಡೂಲ್ಕರ್, ಲತಾ ಮಂಗೇಶ್ಕರ್ ಸೇರಿದಂತೆ ಕೆಲವು ಗಣ್ಯರು ‘#ಇಂಡಿಯಾ ಟುಗೆದರ್‘, ‘#ಇಂಡಿಯಾ ಅಗೇನ್ಸ್ಟ್ ಪ್ರೊಪಗಾಂಡ’ ಎಂಬ ಹ್ಯಾಷ್ಟ್ಯಾಗ್ನಡಿ ಟ್ವೀಟ್ ಮಾಡಿದ್ದರು. ಪಾಪ್ತಾರೆ ರಿಯಾನಾ ಹಾಗೂ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಅವರು ರೈತರ ವಿಚಾರವನ್ನು ಟ್ವಿಟರ್ನಲ್ಲಿ ಪ್ರಸ್ತಾಪಿಸಿದ ಬಳಿಕ ಇಲ್ಲಿನ ಕೆಲವು ಪ್ರಮುಖರು ಭಾರತದ ಪರವಾಗಿ ಟ್ವೀಟ್ ಮಾಡಿದ್ದರು.