ನವದೆಹಲಿ: ರೈತ ಸಂಘಟನೆಗಳ 13 ಪ್ರತಿನಿಧಿಗಳ ಜತೆಗೆ ಅಮಿತ್ ಶಾ ಅವರು ಮಂಗಳವಾರ ರಾತ್ರಿ 8.30ರ ಹೊತ್ತಿಗೆ ನಡೆಸಿದ ‘ಅನೌಪಚಾರಿಕ ಮಾತುಕತೆ’ ವಿಫಲವಾಗಿದೆ. ‘ಕಾಯ್ದೆಗಳಿಗೆ ಮಾಡಬಹುದಾದ ತಿದ್ದುಪಡಿಗಳ ಬಗ್ಗೆ ಲಿಖಿತ ಭರವಸೆ ಕೊಡಲಾಗುವುದು ಎಂದು ಶಾ ಅವರು ಹೇಳಿದ್ದಾರೆ. ಆದರೆ, ಕಾಯ್ದೆಗಳನ್ನು ರದ್ದು ಮಾಡಬೇಕು ಎಂಬುದು ನಮ್ಮ ಬೇಡಿಕೆ. ಅದರಲ್ಲಿ ಯಾವುದೇ ರಾಜಿ ಇಲ್ಲ’ ಎಂದು ರೈತ ಮುಖಂಡ ಹನ್ನನ್ ಮೊಲ್ಲಾ ಸಭೆಯ ಬಳಿಕ ಹೇಳಿದ್ದಾರೆ.