<p><strong>ನವದೆಹಲಿ: </strong>ಕೃಷಿ ಕಾಯ್ದೆಗಳನ್ನು ವಿರೋಧಿಸಿ ಜನವರಿ 26ರಂದು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿ ಕುರಿತು ರೈತ ಸಂಘಟನೆಗಳ ಮುಖಂಡರು ಬುಧವಾರ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.</p>.<p>ಟ್ರ್ಯಾಕ್ಟರ್ ರ್ಯಾಲಿ ಮಾರ್ಗ ಮತ್ತು ವ್ಯವಸ್ಥೆ ಕುರಿತು ಮುಖಂಡರು ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಜಮುರಿ ಕಿಸಾನ್ ಯೂನಿಯನ್ ನಾಯಕ ಕಲ್ವಂತ್ ಸಿಂಗ್ ಸಂಧು ತಿಳಿಸಿದ್ದಾರೆ.</p>.<p>ದೆಹಲಿ ಪೊಲೀಸ್ನ ಉತ್ತರ ವಲಯದ ಜಂಟಿ ಪೊಲೀಸ್ ಆಯುಕ್ತ ಎಸ್.ಎಸ್. ಯಾದವ್ ಸಭೆ ನಡೆಸುವ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಹರಿಯಾಣ ಮತ್ತು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಶಾಂತಿಯುತ ರ್ಯಾಲಿ ನಡೆಸಲು ಅಧಿಕಾರಿಗಳು ಸಹಕಾರ ನೀಡಬೇಕು. ರ್ಯಾಲಿ ನಿಲ್ಲಿಸುವ ಪ್ರಯತ್ನ ಮಾಡಬಾರದು ಎಂದು ರೈತ ಸಂಘಟನೆಗಳ ಮುಖಂಡರು ಕೋರಿದ್ದಾರೆ.</p>.<p>ದೆಹಲಿ ಗಡಿಯಲ್ಲಿ ಕಳೆದ 56 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಭರದಿಂದ ಸಿದ್ಧತೆಗಳನ್ನು ರೈತರು ಕೈಗೊಂಡಿದ್ದಾರೆ. ಇದಕ್ಕೆ ಮುನ್ನವೇ ಜನರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪಂಜಾಬ್ನ ಹಳ್ಳಿಗಳಲ್ಲೂ ರ್ಯಾಲಿಗಳನ್ನು ಆಯೋಜಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೃಷಿ ಕಾಯ್ದೆಗಳನ್ನು ವಿರೋಧಿಸಿ ಜನವರಿ 26ರಂದು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿ ಕುರಿತು ರೈತ ಸಂಘಟನೆಗಳ ಮುಖಂಡರು ಬುಧವಾರ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.</p>.<p>ಟ್ರ್ಯಾಕ್ಟರ್ ರ್ಯಾಲಿ ಮಾರ್ಗ ಮತ್ತು ವ್ಯವಸ್ಥೆ ಕುರಿತು ಮುಖಂಡರು ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಜಮುರಿ ಕಿಸಾನ್ ಯೂನಿಯನ್ ನಾಯಕ ಕಲ್ವಂತ್ ಸಿಂಗ್ ಸಂಧು ತಿಳಿಸಿದ್ದಾರೆ.</p>.<p>ದೆಹಲಿ ಪೊಲೀಸ್ನ ಉತ್ತರ ವಲಯದ ಜಂಟಿ ಪೊಲೀಸ್ ಆಯುಕ್ತ ಎಸ್.ಎಸ್. ಯಾದವ್ ಸಭೆ ನಡೆಸುವ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಹರಿಯಾಣ ಮತ್ತು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಶಾಂತಿಯುತ ರ್ಯಾಲಿ ನಡೆಸಲು ಅಧಿಕಾರಿಗಳು ಸಹಕಾರ ನೀಡಬೇಕು. ರ್ಯಾಲಿ ನಿಲ್ಲಿಸುವ ಪ್ರಯತ್ನ ಮಾಡಬಾರದು ಎಂದು ರೈತ ಸಂಘಟನೆಗಳ ಮುಖಂಡರು ಕೋರಿದ್ದಾರೆ.</p>.<p>ದೆಹಲಿ ಗಡಿಯಲ್ಲಿ ಕಳೆದ 56 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಭರದಿಂದ ಸಿದ್ಧತೆಗಳನ್ನು ರೈತರು ಕೈಗೊಂಡಿದ್ದಾರೆ. ಇದಕ್ಕೆ ಮುನ್ನವೇ ಜನರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪಂಜಾಬ್ನ ಹಳ್ಳಿಗಳಲ್ಲೂ ರ್ಯಾಲಿಗಳನ್ನು ಆಯೋಜಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>