<p><strong>ನವದೆಹಲಿ:</strong> ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಸಂಭವಿಸಿದ ಹಿಂಸಾಚಾರದ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ.</p>.<p>ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್ನಲ್ಲಿ ಈ ಕುರಿತು ಅರ್ಜಿ ಸಲ್ಲಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ, ಹೈಕೋರ್ಟ್ನ ಇಬ್ಬರು ನಿವೃತ್ತ ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿಸದಸ್ಯ ವಿಚಾರಣಾ ಆಯೋಗವನ್ನು ನೇಮಿಸಬೇಕು. ಈ ಸಮಿತಿ ನಿಗದಿತ ಅವಧಿಯಲ್ಲಿ ಘಟನೆಯ ತನಿಖೆ ನಡೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿ ವರದಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಬೇಕೆಂದು ಮನವಿ ಮಾಡಿದ್ದಾರೆ.</p>.<p>ಟ್ರ್ಯಾಕ್ಟರ್ ರ್ಯಾಲಿ ನಡೆದ ದಿನದಂದು ಹಿಂಸಾಚಾರ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವಂತಹ ಘಟನೆಗಳಿಗೆ ಕಾರಣವಾದ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸೂಕ್ತ ಕಲಂಗಳ ಅಡಿ ಎಫ್ಐಆರ್ ದಾಖಲಿಸಲು ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡುವಂತೆ ವಿಶಾಲ್ ಅರ್ಜಿಯಲ್ಲಿ ಕೋರಿದ್ದಾರೆ.</p>.<p>ಈ ಘಟನೆಯಲ್ಲಿ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ನೂರಾರು ಪೊಲೀಸರು ಗಾಯಗೊಂಡಿದ್ದಾರೆ. ಇದೇ ವೇಳೆ ಸರ್ಕಾರ ದೆಹಲಿಯಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿತ್ತು. ಈ ಎಲ್ಲ ಬೆಳವಣಿಗೆಗಳು ಸಾರ್ವಜನಿಕ ಜೀವನದ ಮೇಲೆ ತೀವ್ರ ಪರಿಣಾಮಬೀರಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.</p>.<p>‘ಘಟನೆಗೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಈ ಘಟನೆಯ ತನಿಖೆ ನಡೆಸಲು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ, ಅದರಿಂದ ತನಿಖೆ ನಡೆಸಬೇಕು‘ ಮನವಿಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಸಂಭವಿಸಿದ ಹಿಂಸಾಚಾರದ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ.</p>.<p>ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್ನಲ್ಲಿ ಈ ಕುರಿತು ಅರ್ಜಿ ಸಲ್ಲಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ, ಹೈಕೋರ್ಟ್ನ ಇಬ್ಬರು ನಿವೃತ್ತ ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿಸದಸ್ಯ ವಿಚಾರಣಾ ಆಯೋಗವನ್ನು ನೇಮಿಸಬೇಕು. ಈ ಸಮಿತಿ ನಿಗದಿತ ಅವಧಿಯಲ್ಲಿ ಘಟನೆಯ ತನಿಖೆ ನಡೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿ ವರದಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಬೇಕೆಂದು ಮನವಿ ಮಾಡಿದ್ದಾರೆ.</p>.<p>ಟ್ರ್ಯಾಕ್ಟರ್ ರ್ಯಾಲಿ ನಡೆದ ದಿನದಂದು ಹಿಂಸಾಚಾರ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವಂತಹ ಘಟನೆಗಳಿಗೆ ಕಾರಣವಾದ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸೂಕ್ತ ಕಲಂಗಳ ಅಡಿ ಎಫ್ಐಆರ್ ದಾಖಲಿಸಲು ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡುವಂತೆ ವಿಶಾಲ್ ಅರ್ಜಿಯಲ್ಲಿ ಕೋರಿದ್ದಾರೆ.</p>.<p>ಈ ಘಟನೆಯಲ್ಲಿ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ನೂರಾರು ಪೊಲೀಸರು ಗಾಯಗೊಂಡಿದ್ದಾರೆ. ಇದೇ ವೇಳೆ ಸರ್ಕಾರ ದೆಹಲಿಯಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿತ್ತು. ಈ ಎಲ್ಲ ಬೆಳವಣಿಗೆಗಳು ಸಾರ್ವಜನಿಕ ಜೀವನದ ಮೇಲೆ ತೀವ್ರ ಪರಿಣಾಮಬೀರಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.</p>.<p>‘ಘಟನೆಗೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಈ ಘಟನೆಯ ತನಿಖೆ ನಡೆಸಲು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ, ಅದರಿಂದ ತನಿಖೆ ನಡೆಸಬೇಕು‘ ಮನವಿಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>