ನವದೆಹಲಿ: ‘ಒಂದು ಹೊತ್ತಿನ ಊಟ ತ್ಯಜಿಸುವ ಮೂಲಕ ರೈತರ ದಿನಾಚರಣೆ, ಮಾಜಿ ಪ್ರಧಾನಿ ಚರಣ್ಸಿಂಗ್ ಜನ್ಮದಿನವನ್ನು ಆಚರಿಸಿ. ವಿವಾದಿತ ಕೃಷಿ ಕಾಯ್ದೆಗಳ ರದ್ಧತಿಗಾಗಿ ನಡೆಸುತ್ತಿರುವ ನಮ್ಮ ಹೋರಾಟವನ್ನು ಬೆಂಬಲಿಸಿ' ಎಂದು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ರೈತರು ದೇಶದ ನಾಗರಿಕರನ್ನು ಒತ್ತಾಯಿಸಿದ್ದಾರೆ.