<p><strong>ಲಖನೌ:</strong> ಭಗವಾನ್ ಶ್ರೀಕೃಷ್ಣನನ್ನು ಭೇಟಿಯಾಗಲು ಬಯಸಿದ ರಷ್ಯಾದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನ ಪಟ್ಟಣದ ಅಪಾರ್ಟ್ವೊಂದರ ಆರನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದ ಘಟನೆ ಶನಿವಾರ ನಡೆದಿದೆ.</p>.<p>ಮೃತ ಮಹಿಳೆಯನ್ನು ರಷ್ಯಾದ ಟಟ್ಯಾನ ಹೆಮೆಲೋವಸ್ಕಾಯ (41) ಎಂದು ಗುರುತಿಸಲಾಗಿದೆ. ಇವರು ವೃಂದಾವನದ ರಮಣ್ ರೇತಿ ಪ್ರದೇಶದ ಅಪಾರ್ಟ್ವೊಂದರಲ್ಲಿ ವಾಸಿಸುತ್ತಿದ್ದರು.</p>.<p>‘ಟಟ್ಯಾನ ಶನಿವಾರ ಸಂಜೆಯ ವೇಳೆ ತಮ್ಮ ಅಪಾರ್ಟ್ಮೆಂಟ್ನ 6ನೇ ಮಹಡಿಯ ಕಿಟಕಿ ಮೂಲಕ ಜಿಗಿದಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಮೃತರಾಗಿದ್ದಾರೆ ಎಂದು ವೈದ್ಯರು ತಿಳಿಸಿದರು’ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ.</p>.<p>ರಮಣ್ ರೇತಿಯಲ್ಲಿರುವ ಅಪಾರ್ಟ್ಮೆಂಟ್ ‘ರಷ್ಯನ್ ಬಿಲ್ಡಿಂಗ್’ಎಂದೇ ಜನಪ್ರಿಯವಾಗಿದೆ. 2020ರ ಫೆಬ್ರುವರಿಯಿಂದಲೇ ರಷ್ಯನ್ ಮಹಿಳೆ ಟಟ್ಯಾನ ಹೆಮೆಲೋವಸ್ಕಾಯ ಇಲ್ಲಿ ವಾಸವಿದ್ದರು.</p>.<p>‘ಟಟ್ಯಾನ ಅವರ ಕನಸಿನಲ್ಲಿ ಭಗವಾನ್ ಶ್ರೀಕೃಷ್ಣ ಬರುತ್ತಿದ್ದ. ದೇವರನ್ನು ಭೇಟಿಯಾಗಬೇಕೆಂದು ಆಕೆ ಹಂಬಲಿಸುತ್ತಿದ್ದಳು’ ಎಂದು ಟಟ್ಯಾನ ಅವರ ಜತೆಗೆ ವಾಸಿಸುತ್ತಿದ್ದ ಸ್ನೇಹಿತರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>‘ಟಟ್ಯಾನ್ ಶ್ರೀಕೃಷ್ಣನ ಪರಮ ಭಕ್ತೆಯಾಗಿದ್ದರು’ ಎಂದು ಅದೇ ಅಪಾರ್ಟ್ಮೆಂಟ್ನಲ್ಲಿ ವಾಸವಿರುವ ನಿವಾಸಿಗಳು ಹೇಳಿದ್ದಾರೆ.</p>.<p>ವೃಂದಾವನ ಮತ್ತು ಮಥುರಾದಲ್ಲಿ ಶ್ರೀಕೃಷ್ಣನ ಅನೇಕ ದೇವಾಲಯಗಳಿದ್ದು ಜಗತ್ತಿನ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ.</p>.<p>‘ಮೇಲ್ನೋಟಕ್ಕೆ ಈ ಘಟನೆಯು ಆತ್ಮಹತ್ಯೆ ಎಂದು ಗೋಚರಿಸುತ್ತಿದೆ. ಆದರೂ ಪ್ರಕರಣದ ತನಿಖೆಯನ್ನು ಕೈಗೊಳ್ಳಲಾಗಿದೆ’ ಎಂದು ಮಥುರಾದ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ಈಗಾಗಲೇ ನವದೆಹಲಿಯಲ್ಲಿರುವ ರಷ್ಯನ್ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಭಗವಾನ್ ಶ್ರೀಕೃಷ್ಣನನ್ನು ಭೇಟಿಯಾಗಲು ಬಯಸಿದ ರಷ್ಯಾದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನ ಪಟ್ಟಣದ ಅಪಾರ್ಟ್ವೊಂದರ ಆರನೇ ಮಹಡಿಯಿಂದ ಹಾರಿ ಸಾವನ್ನಪ್ಪಿದ್ದ ಘಟನೆ ಶನಿವಾರ ನಡೆದಿದೆ.</p>.<p>ಮೃತ ಮಹಿಳೆಯನ್ನು ರಷ್ಯಾದ ಟಟ್ಯಾನ ಹೆಮೆಲೋವಸ್ಕಾಯ (41) ಎಂದು ಗುರುತಿಸಲಾಗಿದೆ. ಇವರು ವೃಂದಾವನದ ರಮಣ್ ರೇತಿ ಪ್ರದೇಶದ ಅಪಾರ್ಟ್ವೊಂದರಲ್ಲಿ ವಾಸಿಸುತ್ತಿದ್ದರು.</p>.<p>‘ಟಟ್ಯಾನ ಶನಿವಾರ ಸಂಜೆಯ ವೇಳೆ ತಮ್ಮ ಅಪಾರ್ಟ್ಮೆಂಟ್ನ 6ನೇ ಮಹಡಿಯ ಕಿಟಕಿ ಮೂಲಕ ಜಿಗಿದಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಮೃತರಾಗಿದ್ದಾರೆ ಎಂದು ವೈದ್ಯರು ತಿಳಿಸಿದರು’ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ.</p>.<p>ರಮಣ್ ರೇತಿಯಲ್ಲಿರುವ ಅಪಾರ್ಟ್ಮೆಂಟ್ ‘ರಷ್ಯನ್ ಬಿಲ್ಡಿಂಗ್’ಎಂದೇ ಜನಪ್ರಿಯವಾಗಿದೆ. 2020ರ ಫೆಬ್ರುವರಿಯಿಂದಲೇ ರಷ್ಯನ್ ಮಹಿಳೆ ಟಟ್ಯಾನ ಹೆಮೆಲೋವಸ್ಕಾಯ ಇಲ್ಲಿ ವಾಸವಿದ್ದರು.</p>.<p>‘ಟಟ್ಯಾನ ಅವರ ಕನಸಿನಲ್ಲಿ ಭಗವಾನ್ ಶ್ರೀಕೃಷ್ಣ ಬರುತ್ತಿದ್ದ. ದೇವರನ್ನು ಭೇಟಿಯಾಗಬೇಕೆಂದು ಆಕೆ ಹಂಬಲಿಸುತ್ತಿದ್ದಳು’ ಎಂದು ಟಟ್ಯಾನ ಅವರ ಜತೆಗೆ ವಾಸಿಸುತ್ತಿದ್ದ ಸ್ನೇಹಿತರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>‘ಟಟ್ಯಾನ್ ಶ್ರೀಕೃಷ್ಣನ ಪರಮ ಭಕ್ತೆಯಾಗಿದ್ದರು’ ಎಂದು ಅದೇ ಅಪಾರ್ಟ್ಮೆಂಟ್ನಲ್ಲಿ ವಾಸವಿರುವ ನಿವಾಸಿಗಳು ಹೇಳಿದ್ದಾರೆ.</p>.<p>ವೃಂದಾವನ ಮತ್ತು ಮಥುರಾದಲ್ಲಿ ಶ್ರೀಕೃಷ್ಣನ ಅನೇಕ ದೇವಾಲಯಗಳಿದ್ದು ಜಗತ್ತಿನ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ.</p>.<p>‘ಮೇಲ್ನೋಟಕ್ಕೆ ಈ ಘಟನೆಯು ಆತ್ಮಹತ್ಯೆ ಎಂದು ಗೋಚರಿಸುತ್ತಿದೆ. ಆದರೂ ಪ್ರಕರಣದ ತನಿಖೆಯನ್ನು ಕೈಗೊಳ್ಳಲಾಗಿದೆ’ ಎಂದು ಮಥುರಾದ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ಈಗಾಗಲೇ ನವದೆಹಲಿಯಲ್ಲಿರುವ ರಷ್ಯನ್ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>