<p><strong>ಶ್ರೀನಗರ</strong>: ಕಾಶ್ಮೀರದ 47 ವಿಧಾನಸಭಾ ಕ್ಷೇತ್ರಗಳಿಗೆ ನ್ಯಾಷನಲ್ ಕಾನ್ಫರೆನ್ಸ್(ಎನ್ಸಿ) ತನ್ನ ಉಸ್ತುವಾರಿಗಳ ಹೆಸರುಗಳನ್ನು ಘೋಷಿಸಿದ್ದು, ಈ ಮೂಲಕ ಗುಪ್ಕಾರ್ ಕೂಟದ(ಪಿಎಜಿಡಿ) ಭವಿಷ್ಯ ಅತಂತ್ರಗೊಂಡಿದೆ ಎಂದು ಮೂಲಗಳು ಹೇಳಿವೆ.</p>.<p>ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಉಸ್ತುವಾರಿಗಳು ಪಕ್ಷದ ಅಭ್ಯರ್ಥಿಗಳಾಗುವ ಸಾಧ್ಯತೆ ಇದೆ ಎಂದೂ ತಿಳಿಸಿವೆ.</p>.<p>ಉಸ್ತುವಾರಿಗಳ ಪಟ್ಟಿಯಲ್ಲಿ ಫಾರೂಖ್ ಅಬ್ದುಲ್ಲಾ ಮತ್ತು ಅವರ ಮಗ ಒಮರ್ ಅಬ್ದುಲ್ಲಾ ಅವರ ಹೆಸರುಗಳು ಇಲ್ಲ. ಆದರೂ ಚುನಾವಣೆ ಘೋಷಣೆಯಾದರೆ ಇವರು ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.</p>.<p>ಕಾಶ್ಮೀರದಲ್ಲಿ ರಾಜ್ಯದ ಸ್ಥಾನಮಾನ ಪುನರ್ ಸ್ಥಾಪಿಸುವವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ನಿಲುವನ್ನು ಒಮರ್ ಅವರು ಪ್ರಕಟಿಸಿದ್ದಾರೆ. ಆದರೆ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಅವರು ತಮ್ಮ ಅಂತಿಮ ತೀರ್ಮಾನವನ್ನು ತಿಳಿಸಲಿದ್ದಾರೆ ಎಂದೂ ವಿವರಿಸಿವೆ.</p>.<p>ಪಿಎಜಿಡಿಯ ಯಾವುದೇ ಘಟಕಗಳ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಆಗಸ್ಟ್ನಲ್ಲಿ ಎನ್.ಸಿ ಹೇಳಿತ್ತು. ಕೇಂದ್ರಾಡಳಿತ ಪ್ರದೇಶದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದೂ ತಿಳಿಸಿತ್ತು.</p>.<p>ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್, ಸಿಪಿಎಂ ಮತ್ತು ಸಿಪಿಐ ಸೇರಿರುವಗುಪ್ಕಾರ್ ಕೂಟವನ್ನು ಜಮ್ಮ ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ರಚಿಸಲಾಗಿತ್ತು. ವಿಶೇಷ ಸ್ಥಾನಮಾನವನ್ನು ಪುನರ್ ಸ್ಥಾಪಿಸಬೇಕೆಂದು ಆಗ್ರಹಿಸಿ ಈ ಕೂಟವು ಹೋರಾಟ ನಡೆಸುತ್ತಿದೆ.</p>.<p>‘ಪಿಎಜಿಡಿ ಯಾವಾಗಲೂ ಇರುತ್ತದೆ. ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿಗಳು ಮುಂದಿನ ಶಾಸಕರಲ್ಲ. ಕೆಲವರು ಅವರಿಗೆ ತೋಚಿದಂತೆ ಹೇಳುತ್ತಿದ್ದಾರೆ. ನಾವು ಅವರಿಗೆಲ್ಲಾ ಉತ್ತರ ನೀಡುವುದಿಲ್ಲ’ ಎಂದು ಎನ್.ಸಿ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಸ್ಪಷ್ಟಪಡಿಸಿದ್ದಾರೆ.</p>.<p>ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಂದಲೂ ನ್ಯಾಷನಲ್ ಕಾನ್ಫರೆನ್ಸ್ ಸ್ಪರ್ಧಿಸಲು ತೀರ್ಮಾನಿಸಿರುವುದರಿಂದ ಗುಪ್ಕಾರ್ ಕೂಟವು ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಕಾಶ್ಮೀರದ 47 ವಿಧಾನಸಭಾ ಕ್ಷೇತ್ರಗಳಿಗೆ ನ್ಯಾಷನಲ್ ಕಾನ್ಫರೆನ್ಸ್(ಎನ್ಸಿ) ತನ್ನ ಉಸ್ತುವಾರಿಗಳ ಹೆಸರುಗಳನ್ನು ಘೋಷಿಸಿದ್ದು, ಈ ಮೂಲಕ ಗುಪ್ಕಾರ್ ಕೂಟದ(ಪಿಎಜಿಡಿ) ಭವಿಷ್ಯ ಅತಂತ್ರಗೊಂಡಿದೆ ಎಂದು ಮೂಲಗಳು ಹೇಳಿವೆ.</p>.<p>ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಉಸ್ತುವಾರಿಗಳು ಪಕ್ಷದ ಅಭ್ಯರ್ಥಿಗಳಾಗುವ ಸಾಧ್ಯತೆ ಇದೆ ಎಂದೂ ತಿಳಿಸಿವೆ.</p>.<p>ಉಸ್ತುವಾರಿಗಳ ಪಟ್ಟಿಯಲ್ಲಿ ಫಾರೂಖ್ ಅಬ್ದುಲ್ಲಾ ಮತ್ತು ಅವರ ಮಗ ಒಮರ್ ಅಬ್ದುಲ್ಲಾ ಅವರ ಹೆಸರುಗಳು ಇಲ್ಲ. ಆದರೂ ಚುನಾವಣೆ ಘೋಷಣೆಯಾದರೆ ಇವರು ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.</p>.<p>ಕಾಶ್ಮೀರದಲ್ಲಿ ರಾಜ್ಯದ ಸ್ಥಾನಮಾನ ಪುನರ್ ಸ್ಥಾಪಿಸುವವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ನಿಲುವನ್ನು ಒಮರ್ ಅವರು ಪ್ರಕಟಿಸಿದ್ದಾರೆ. ಆದರೆ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಅವರು ತಮ್ಮ ಅಂತಿಮ ತೀರ್ಮಾನವನ್ನು ತಿಳಿಸಲಿದ್ದಾರೆ ಎಂದೂ ವಿವರಿಸಿವೆ.</p>.<p>ಪಿಎಜಿಡಿಯ ಯಾವುದೇ ಘಟಕಗಳ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಆಗಸ್ಟ್ನಲ್ಲಿ ಎನ್.ಸಿ ಹೇಳಿತ್ತು. ಕೇಂದ್ರಾಡಳಿತ ಪ್ರದೇಶದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದೂ ತಿಳಿಸಿತ್ತು.</p>.<p>ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್, ಸಿಪಿಎಂ ಮತ್ತು ಸಿಪಿಐ ಸೇರಿರುವಗುಪ್ಕಾರ್ ಕೂಟವನ್ನು ಜಮ್ಮ ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ರಚಿಸಲಾಗಿತ್ತು. ವಿಶೇಷ ಸ್ಥಾನಮಾನವನ್ನು ಪುನರ್ ಸ್ಥಾಪಿಸಬೇಕೆಂದು ಆಗ್ರಹಿಸಿ ಈ ಕೂಟವು ಹೋರಾಟ ನಡೆಸುತ್ತಿದೆ.</p>.<p>‘ಪಿಎಜಿಡಿ ಯಾವಾಗಲೂ ಇರುತ್ತದೆ. ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿಗಳು ಮುಂದಿನ ಶಾಸಕರಲ್ಲ. ಕೆಲವರು ಅವರಿಗೆ ತೋಚಿದಂತೆ ಹೇಳುತ್ತಿದ್ದಾರೆ. ನಾವು ಅವರಿಗೆಲ್ಲಾ ಉತ್ತರ ನೀಡುವುದಿಲ್ಲ’ ಎಂದು ಎನ್.ಸಿ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಸ್ಪಷ್ಟಪಡಿಸಿದ್ದಾರೆ.</p>.<p>ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಂದಲೂ ನ್ಯಾಷನಲ್ ಕಾನ್ಫರೆನ್ಸ್ ಸ್ಪರ್ಧಿಸಲು ತೀರ್ಮಾನಿಸಿರುವುದರಿಂದ ಗುಪ್ಕಾರ್ ಕೂಟವು ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>