<p><strong>ನವದೆಹಲಿ:</strong> ಬಿಜೆಪಿಯ ಅಣತಿಯಂತೆ ಗುಜರಾತ್ನ ಪೂರ್ವ ಸೂರತ್ನ ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲ ಅವರನ್ನು ಅಪಹರಿಸಲಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಈ ಕೃತ್ಯ ನಡೆಸಿದೆ ಎಂದಿದ್ದಾರೆ.</p>.<p>ಜರಿವಾಲ ಅವರು ಕುಟುಂಬ ಸದಸ್ಯರ ಸಮೇತ ಮಂಗಳವಾರದಿಂದ ಕಾಣೆಯಾಗಿದ್ದಾರೆ. ಅವರು ತಮ್ಮ ನಾಮಪತ್ರ ಪರಿಶೀಲನೆಯ ನಿಟ್ಟಿನಲ್ಲಿ ಸೂರತ್ನ ಚುನಾವಣೆ ಆಯೋಗದ ಕಚೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭ ಜರಿವಾಲ ಅವರ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಲಾಗಿದೆ ಎಂದು ಸಿಸೋಡಿಯಾ ದೂರಿದ್ದಾರೆ.</p>.<p>ಈ ಚುನಾವಣೆಯಲ್ಲಿ ಬಿಜೆಪಿ ಗುಜರಾತ್ ಅನ್ನು ಕಳೆದುಕೊಳ್ಳಲಿದೆ. ಹಾಗಾಗಿ ನಮ್ಮ ಪೂರ್ವ ಸೂರತ್ನ ಅಭ್ಯರ್ಥಿಯನ್ನು ಅಪಹರಿಸುವಷ್ಟು ಕೀಳುಮಟ್ಟಕ್ಕೆ ಬಿಜೆಪಿ ಇಳಿದಿದೆ. ಸೋಲಿನ ಭಯದಿಂದ ಬಿಜೆಪಿ ಗೂಂಡಾಗಳು ಕಾಂಚನ್ ಜರಿವಾಲ ಅವರನ್ನು ಅಪಹರಿಸಿದ್ದಾರೆ ಎಂದು ದೆಹಲಿಯಲ್ಲಿ ಸಿಸೋಡಿಯಾ ಆರೋಪಿಸಿದ್ದಾರೆ.</p>.<p>ಇದು ನಮ್ಮ ಅಭ್ಯರ್ಥಿಯ ಅಪಹರಣ ಮಾತ್ರವಲ್ಲ, ಇದು ಪ್ರಜಾಪ್ರಭುತ್ವದ ಅಪಹರಣ. ಗುಜರಾತ್ನಲ್ಲಿ ತುಂಬಾ ಅಪಾಯಕರ ಸ್ಥಿತಿ ಇದೆ. ಇದನ್ನು ಚುನಾವಣೆ ಆಯೋಗವು ಗಂಭೀರವಾಗಿ ಪರಿಗಣಿಸಬೇಕು, ನಮ್ಮ ಅಭ್ಯರ್ಥಿ ಮತ್ತು ಅವರ ಕುಟುಂಬ ಸದಸ್ಯರನ್ನು ವಾಪಸ್ ಕರೆತರಬೇಕು ಎಂದು ಸಿಸೋಡಿಯಾ ಆಗ್ರಹಿಸಿದ್ದಾರೆ.</p>.<p>ಅಭ್ಯರ್ಥಿ ಕಾಣೆಯಾಗಿ 24 ಗಂಟೆಗಳು ಕಳೆದರೂ ಗುಜರಾತ್ನ ಚುನಾವಣಾ ಆಯೋಗದ ಮುಖ್ಯಸ್ಥರು ಯಾವುದೇ ಕ್ರಮ ಕೈಗೊಂಡಿಲ್ಲ. ಪತ್ತೆ ಹಚ್ಚುವ ಅಥವಾ ರಕ್ಷಿಸುವ ಕೆಲಸಕ್ಕೆ ಮುಂದಾಗಿಲ್ಲ. ಇದು ಚುನಾವಣಾ ಆಯೋಗದ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ ಎಂದು ಸಿಸೋಡಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿಯ ಅಣತಿಯಂತೆ ಗುಜರಾತ್ನ ಪೂರ್ವ ಸೂರತ್ನ ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲ ಅವರನ್ನು ಅಪಹರಿಸಲಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಈ ಕೃತ್ಯ ನಡೆಸಿದೆ ಎಂದಿದ್ದಾರೆ.</p>.<p>ಜರಿವಾಲ ಅವರು ಕುಟುಂಬ ಸದಸ್ಯರ ಸಮೇತ ಮಂಗಳವಾರದಿಂದ ಕಾಣೆಯಾಗಿದ್ದಾರೆ. ಅವರು ತಮ್ಮ ನಾಮಪತ್ರ ಪರಿಶೀಲನೆಯ ನಿಟ್ಟಿನಲ್ಲಿ ಸೂರತ್ನ ಚುನಾವಣೆ ಆಯೋಗದ ಕಚೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭ ಜರಿವಾಲ ಅವರ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಲಾಗಿದೆ ಎಂದು ಸಿಸೋಡಿಯಾ ದೂರಿದ್ದಾರೆ.</p>.<p>ಈ ಚುನಾವಣೆಯಲ್ಲಿ ಬಿಜೆಪಿ ಗುಜರಾತ್ ಅನ್ನು ಕಳೆದುಕೊಳ್ಳಲಿದೆ. ಹಾಗಾಗಿ ನಮ್ಮ ಪೂರ್ವ ಸೂರತ್ನ ಅಭ್ಯರ್ಥಿಯನ್ನು ಅಪಹರಿಸುವಷ್ಟು ಕೀಳುಮಟ್ಟಕ್ಕೆ ಬಿಜೆಪಿ ಇಳಿದಿದೆ. ಸೋಲಿನ ಭಯದಿಂದ ಬಿಜೆಪಿ ಗೂಂಡಾಗಳು ಕಾಂಚನ್ ಜರಿವಾಲ ಅವರನ್ನು ಅಪಹರಿಸಿದ್ದಾರೆ ಎಂದು ದೆಹಲಿಯಲ್ಲಿ ಸಿಸೋಡಿಯಾ ಆರೋಪಿಸಿದ್ದಾರೆ.</p>.<p>ಇದು ನಮ್ಮ ಅಭ್ಯರ್ಥಿಯ ಅಪಹರಣ ಮಾತ್ರವಲ್ಲ, ಇದು ಪ್ರಜಾಪ್ರಭುತ್ವದ ಅಪಹರಣ. ಗುಜರಾತ್ನಲ್ಲಿ ತುಂಬಾ ಅಪಾಯಕರ ಸ್ಥಿತಿ ಇದೆ. ಇದನ್ನು ಚುನಾವಣೆ ಆಯೋಗವು ಗಂಭೀರವಾಗಿ ಪರಿಗಣಿಸಬೇಕು, ನಮ್ಮ ಅಭ್ಯರ್ಥಿ ಮತ್ತು ಅವರ ಕುಟುಂಬ ಸದಸ್ಯರನ್ನು ವಾಪಸ್ ಕರೆತರಬೇಕು ಎಂದು ಸಿಸೋಡಿಯಾ ಆಗ್ರಹಿಸಿದ್ದಾರೆ.</p>.<p>ಅಭ್ಯರ್ಥಿ ಕಾಣೆಯಾಗಿ 24 ಗಂಟೆಗಳು ಕಳೆದರೂ ಗುಜರಾತ್ನ ಚುನಾವಣಾ ಆಯೋಗದ ಮುಖ್ಯಸ್ಥರು ಯಾವುದೇ ಕ್ರಮ ಕೈಗೊಂಡಿಲ್ಲ. ಪತ್ತೆ ಹಚ್ಚುವ ಅಥವಾ ರಕ್ಷಿಸುವ ಕೆಲಸಕ್ಕೆ ಮುಂದಾಗಿಲ್ಲ. ಇದು ಚುನಾವಣಾ ಆಯೋಗದ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ ಎಂದು ಸಿಸೋಡಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>