<p><strong>ಚಿತ್ತೂರು: </strong>ಆಂಧ್ರ ಪ್ರದೇಶದ ಚಿತ್ತೂರಿನ ಪುಟಲಪಟ್ಟು ಎಂಬಲ್ಲಿನ ಹಾಲು ಸಂಸ್ಕರಣಾ ಘಟಕದಲ್ಲಿ ಗುರುವಾರ ಸಂಜೆ ಅಮೋನಿಯಾ ಅನಿಲ ಸೋರಿಕೆ ಉಂಟಾದ ಪರಿಣಾಮ 14 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>‘ಸಂಜೆ ಸುಮಾರು 5 ಗಂಟೆ ವೇಳೆಗೆ ಪುಟಲಪಟ್ಟು ಹಾಲು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆ ಉಂಟಾದ ಬಗ್ಗೆ ಮಾಹಿತಿ ದೊರೆಯಿತು. 14 ಕಾರ್ಮಿಕರನ್ನು ಚಿತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಮಹಿಳೆಯರಾಗಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಇವರನ್ನು ತಿರುಪತಿಯ ಎಸ್ವಿಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗುವುದು’ ಎಂದು ಚಿತ್ತೂರು ಜಿಲ್ಲಾಧಿಕಾರಿ ಡಾ. ನಾರಾಯಣ್ ಭರತ್ ಗುಪ್ತಾ ಹೇಳಿದ್ದಾರೆ.</p>.<p>‘ಉಳಿದವರ ಆರೋಗ್ಯ ಸ್ಥಿರವಾಗಿದೆ. ಘಟನೆಗೆ ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಾರಣವೇ ಅಥವಾ ಕಾರ್ಮಿಕರ ನಿರ್ಲಕ್ಷ್ಯ ಕಾರಣವೇ ಎಂಬುದು ಇನ್ನೂ ತಿಳಿದುಬಂದಿಲ್ಲ. ಕೈಗಾರಿಕಾ ಇಲಾಖೆಯ ಪ್ರಧಾನ ವ್ಯವಸ್ಥಾಪಕರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಲಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತೂರು: </strong>ಆಂಧ್ರ ಪ್ರದೇಶದ ಚಿತ್ತೂರಿನ ಪುಟಲಪಟ್ಟು ಎಂಬಲ್ಲಿನ ಹಾಲು ಸಂಸ್ಕರಣಾ ಘಟಕದಲ್ಲಿ ಗುರುವಾರ ಸಂಜೆ ಅಮೋನಿಯಾ ಅನಿಲ ಸೋರಿಕೆ ಉಂಟಾದ ಪರಿಣಾಮ 14 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>‘ಸಂಜೆ ಸುಮಾರು 5 ಗಂಟೆ ವೇಳೆಗೆ ಪುಟಲಪಟ್ಟು ಹಾಲು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆ ಉಂಟಾದ ಬಗ್ಗೆ ಮಾಹಿತಿ ದೊರೆಯಿತು. 14 ಕಾರ್ಮಿಕರನ್ನು ಚಿತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಮಹಿಳೆಯರಾಗಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಇವರನ್ನು ತಿರುಪತಿಯ ಎಸ್ವಿಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗುವುದು’ ಎಂದು ಚಿತ್ತೂರು ಜಿಲ್ಲಾಧಿಕಾರಿ ಡಾ. ನಾರಾಯಣ್ ಭರತ್ ಗುಪ್ತಾ ಹೇಳಿದ್ದಾರೆ.</p>.<p>‘ಉಳಿದವರ ಆರೋಗ್ಯ ಸ್ಥಿರವಾಗಿದೆ. ಘಟನೆಗೆ ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಾರಣವೇ ಅಥವಾ ಕಾರ್ಮಿಕರ ನಿರ್ಲಕ್ಷ್ಯ ಕಾರಣವೇ ಎಂಬುದು ಇನ್ನೂ ತಿಳಿದುಬಂದಿಲ್ಲ. ಕೈಗಾರಿಕಾ ಇಲಾಖೆಯ ಪ್ರಧಾನ ವ್ಯವಸ್ಥಾಪಕರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಲಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>